1:27 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಪತಿ ಬಲಿ: ರಾಯಚೂರಿನಲ್ಲಿ 6 ತಿಂಗಳ ಶಿಶುವನ್ನು ಕೊಂದು ಪತ್ನಿ ಆತ್ಮಹತ್ಯೆ 

17/04/2022, 13:16

ಮಂಗಳೂರು(reporterkarnataka.com):

ರಸ್ತೆ ಅಪಘಾತದಲ್ಲಿ ಪತಿ ಸಾವನ್ನಪ್ಪಿದ ಸುದ್ದಿ ಕೇಳಿ ಆಘಾತಗೊಂಡ ಪತ್ನಿ ತನ್ನ 6 ತಿಂಗಳ ಹಸುಗೂಸನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.

ಮಂಗಳೂರಿನ ಕುಂಟಿಕಾನದಲ್ಲಿರುವ ಅಗ್ನಿಶಾಮಕ ಕಚೇರಿಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಂಗಾಧರ ಬಿ. ಕಮ್ಮಾರ(36) ಅವರು ಎ.ಜೆ. ಆಸ್ಪತ್ರೆ ಬಳಿಯ ಕುಂಟಿಕಾನದಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಬೆಂಗಳೂರಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು ಗಂಗಾಧರ ಸ್ಥಳದಲ್ಲೇ ಮೃತಪಟ್ಟಿದ್ದರು.

ಅಪಘಾತದಲ್ಲಿ ಪತಿ ಮರಣ ಹೊಂದಿದ

ವಿಷಯ ತಿಳಿಯುತ್ತಲೇ ರಾಯಚೂರಿನಲ್ಲಿ ಸಂಬಂಧಿಕರ ಮನೆಯಲ್ಲಿದ್ದ ಪತ್ನಿ ಶೃತಿ (30) ಅವರು ರಾತ್ರಿ 10 ಗಂಟೆಗೆ ತನ್ನ 6 ತಿಂಗಳ ಪುತ್ರನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಶ್ರುತಿ ಅವರು ತಮ್ಮನ ಮನೆಯಲ್ಲಿದ್ದರು. ಮನೆಯವರಿಗೆ ವಿಷಯ ತಿಳಿಯುವ ಮೊದಲೇ ಶೃತಿ ಆತ್ಮಹತ್ಯೆ ಮಾಡಿಕೊಂಡಿದ್ದು ಆಘಾತ ಮೂಡಿಸಿದೆ. ಆಮೂಲಕ ಇಡೀ ಕುಟುಂಬ ಒಂದೇ ದಿನ ಸಾವಿಗೀಡಾದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು