1:15 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಸಚಿವ ಮಾಧುಸ್ವಾಮಿ ಕಮಿಷನ್ ಕೇಳ್ತಾರಂತೆ!: ಬೊಮ್ಮಾಯಿ ಸಂಪುಟದ ಇನ್ನೊಂದು ವಿಕೆಟ್ ಉರುಳುತ್ತಾ?

17/04/2022, 14:33

ತುಮಕೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಬಳಿಕ ಸಚಿವರುಗಳ ಕಮಿಷನ್ ವ್ಯವಹಾರ ಒಂದೊಂದಾಗಿ ಹೊರ ಬೀಳುತ್ತಿದೆ. ಈ ಬಾರಿ ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಆರೋಪ ಕೇಳಿಬರುತ್ತಿದೆ.

ಸಂತೋಷ್ ಪಾಟೀಲ್ ಆರೋಪ ಮಾಡಿದಂತೆ ತುಮಕೂರು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಇದೀಗ ಆರೋಪ ಮಾಡಿದ್ದಾರೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ವೇಣುಗೋಪಾಲ್ ಅವರು ಮಾಧ್ಯಮಗಳ ಮುಂದೆ ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ನೇರ ಆರೋಪ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಎಲ್ಲ 10 ಮಂದಿ ಶಾಸಕರುಗಳಿಗೂ ಕಮಿಷನ್ ಹೋಗುತ್ತೆ. ಯಾವುದೇ ಕಾಮಗಾರಿಗೆ ಟೆಂಡರ್ ಹಾಕುವ ಮುನ್ನ ಸಚಿವ ಮಾಧುಸ್ವಾಮಿ ಅವರನ್ನು ಭೇಟಿಯಾಗಲು ಅಧಿಕಾರಿಗಳು ಸೂಚಿಸುತ್ತಾರೆ. ತಾನು ಕಾನೂನು ಸಚಿವ ಯಾವುದೇ ಕಾಮಗಾರಿ ನಡೆಯಬೇಕಾದರೆ ತನ್ನ ಗಮನಕ್ಕೆ ತರಬೇಕೆಂದು ಸಚಿವರು ತಾಕೀತು ಮಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಶಾಸಕರು ಒಂದು ಲೆಟರ್ ಕೊಡಬೇಕಾದರೂ ಕಮಿಷನ್ ಕೇಳ್ತಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ವೇಣುಗೋಪಾಲ್ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು