2:24 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪಿಎಸ್‍ಐ ಹುದ್ದೆ ನೇಮಕಾತಿಯಲ್ಲಿ ಭಾರೀ ಅವ್ಯವಹಾರ ಆರೋಪ: ಬಿಜೆಪಿ ನಾಯಕಿ ಮನೆಗೆ ಸಿಐಡಿ ದಾಳಿ

17/04/2022, 23:41

ಕಲಬುರಗಿ(reporterkarnataka.com): ರಾಜ್ಯದಲ್ಲಿ 545 ಪಿಎಸ್‍ಐ ಹುದ್ದೆ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು ಇಂದು ಬಿಜೆಪಿ ಜಿಲ್ಲಾ ನಾಯಕಿ ದಿವ್ಯಾ ಹಾಗರಗಿ ಮನೆಗೆ ದಾಳಿ ನಡೆಸಿದೆ.

ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಅವರ ಮನೆಯನ್ನು ಶೋಧಿಸಲು ಸಿಐಡಿ ಡಿವೈಎಸ್‌ಪಿ ಶಂಕರಗೌಡ ನೇತೃತ್ವದ ತಂಡ ಭೇಟಿ ನೀಡಿದೆ.

ದಿವ್ಯಾ ಹಾಗರಗಿ ಅವರು ಕಳೆದ 3-4 ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರ ಪತಿ ರಾಜೇಶ್ ಅವ​ರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ದಿವ್ಯಾ ಅವರು ವಿಜಯಪುರಕ್ಕೆ ಹೋಗಿರುವುದಾಗಿ ವಿಚಾರಣೆ ವೇಳೆ ರಾಜೇಶ್ ಹಾಗರಗಿ ಮಾಹಿತಿ ನೀಡಿದ್ದಾರೆ.

ದಿವ್ಯಾ ಹಾಗರಗಿಗೆ ಅವರಿಗೆ ಸೇರಿದ್ದ ಜ್ಞಾನಜೋತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿತ್ತು. ಇದೇ ಶಾಲೆಯ ಮೂವರು ಮಹಿಳಾ ಕೊಠಡಿ ಮೇಲ್ವಿಚಾರಕರು, ಇದೇ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ನಾಲ್ವರು ಅಭ್ಯರ್ಥಿಗಳು ಸೇರಿ ಒಟ್ಟು ಏಳು ಜನರನ್ನು ಈಗಾಗಲೇ ಸಿಐಡಿ ತಂಡ ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು