12:11 AM Monday16 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಎಂ.ಕಾಂ ಪರೀಕ್ಷೆ: ಕುಡ್ಲದ ಪೊಣ್ಣು, ನಟಿ- ನಿರೂಪಕಿ ಶೀತಲ್ ಮಂಗಳೂರು ಪ್ರಥಮ Rank

18/04/2022, 21:19

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ನಗರದ ಬೆಸೆಂಟ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿನಿ,ನಟಿ, ನಿರೂಪಕಿ ಶೀತಲ್ ಅವರು ಎಂ.ಕಾಂ ಪರೀಕ್ಷೆಯಲ್ಲಿ ಪ್ರಥಮ rank ಪಡೆದಿದ್ದಾರೆ.


ಮಂಗಳೂರಿನ ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ಶಿಕ್ಷಣದಿಂದ ಪದವಿ ವರೆಗೆ ವಿದ್ಯಾಭ್ಯಾಸವನ್ನು ಪೂರೈಸಿದ ಅವರು ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ಎಂ.ಕಾಂ ಶಿಕ್ಷಣ ಪಡೆದರು.


ಅತೀ ಸಣ್ಣ ವಯಸ್ಸಿನಲ್ಲಿ ತುಳು ರಂಗಭೂಮಿ ಪ್ರವೇಶಿಸಿದರು. ನಾಯಕಿ ನಟಿಯಾಗಿ ನಟನೆಯಲ್ಲೂ ಎತ್ತಿದ ಕೈ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಖಾಸಗಿ ಟಿವಿ ವಾಹಿನಿಯಲ್ಲಿ ನಿರೂಪಕಿಯಾಗಿ ಕಾರ್ಯ ನಿರ್ವಹಿಸಿದರು.

ಈಕೆ ಕೆ.ಪ್ರಕಾಶ್ ಹಾಗೂ ಗೀತಾ ದಂಪತಿಯ ಏಕೈಕ ಪುತ್ರಿ. ಪ್ರಸ್ತುತ ಅವರು ಎ. ಜೆ. ಸಂಸ್ಥೆಯಲ್ಲಿ  ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತನ್ನ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ನಟನೆಯಿಂದ ದೂರ ಸರಿದಿದ್ದಾರೆ.


ಬೇರೆ ಭಾಷೆಗಳಲ್ಲಿ ನಟನೆ ಮಾಡುವ ಆಸಕ್ತಿ ಸದ್ಯಕ್ಕಿಲ್ಲ. ತುಳು ಭಾಷೆಯ ಮೇಲೆ ಅಭಿಮಾನ ಮತ್ತು ಪ್ರೀತಿ ಇದೆ. ಹಾಗಾಗಿ ಅವಕಾಶ ಸಿಕ್ಕಾಗ ಬಳಸಿಕೊಂಡೆ. ನಟಿಯಾಗಬೇಕೆಂಬ ಕನಸು ಯಾವತ್ತು ಕಂಡಿಲ್ಲ. ಕಾಲೇಜು ಜೀವನದಲ್ಲಿ ನಟನೆಯಿಂದ ಬರುತ್ತಿದ್ದ ಹಣ ನನ್ನ ವಿದ್ಯಾಭ್ಯಾಸಕ್ಕೆ ಸಹಾಯವಾಗುತ್ತಿತ್ತು. ಮೊದಲು ಓದಿಗೆ ಪ್ರಾಮುಖ್ಯತೆ, ಆಮೇಲೆ ಇತರ ವಿಷಯಕ್ಕೆ ಎಂದು ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ಅವರು ನುಡಿದರು.

ನನ್ನ ತಂದೆ-ತಾಯಿ ಯಾವತ್ತು ಒತ್ತಡ ಮಾಡಿಲ್ಲ ಇಷ್ಟೇ ಅಂಕ ಗಳಿಸಬೇಕು ಅಥವಾ ಇದೇ ಫೀಲ್ಡಿಗೆ ಹೋಗಬೇಕು ಎಂದು ಒತ್ತಡ ಹೇರಿಲ್ಲ.


ಯಾವುದೇ ರಂಗಕ್ಕೆ ಹೋಗು ನಮ್ಮ ಸಹಾಯ ಇದೆ ಎಂದು ಇವತ್ತಿಗೂ ಬೆನ್ನು ತಟ್ಟುತ್ತಿರುವ ತಂದೆ-ತಾಯಿಯೇ ನನಗೆ ಸ್ಪೂರ್ತಿ ಎಂದು ಶೀತಲ್ ಹೇಳುತ್ತಾರೆ. ನನಗೆ ಸಹಕಾರ ನೀಡಿದ ಎಲ್ಲಾ ಶಿಕ್ಷಕರಿಗೂ ಹಾಗೂ ನನಗೆ ಹಾರೈಸಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ.



ದಬಕ್ ದಬ ಐಸಾ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ಮೆಹಂದಿ ಆರ್ಟಿಸ್ಟ್, ಡ್ಯಾನ್ಸರ್ ಕೂಡ ಹೌದು.

ಇತ್ತೀಚಿನ ಸುದ್ದಿ

ಜಾಹೀರಾತು