2:06 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಎಂ.ಕಾಂ ಪರೀಕ್ಷೆ: ಕುಡ್ಲದ ಪೊಣ್ಣು, ನಟಿ- ನಿರೂಪಕಿ ಶೀತಲ್ ಮಂಗಳೂರು ಪ್ರಥಮ Rank

18/04/2022, 21:19

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ನಗರದ ಬೆಸೆಂಟ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿನಿ,ನಟಿ, ನಿರೂಪಕಿ ಶೀತಲ್ ಅವರು ಎಂ.ಕಾಂ ಪರೀಕ್ಷೆಯಲ್ಲಿ ಪ್ರಥಮ rank ಪಡೆದಿದ್ದಾರೆ.


ಮಂಗಳೂರಿನ ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ಶಿಕ್ಷಣದಿಂದ ಪದವಿ ವರೆಗೆ ವಿದ್ಯಾಭ್ಯಾಸವನ್ನು ಪೂರೈಸಿದ ಅವರು ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ಎಂ.ಕಾಂ ಶಿಕ್ಷಣ ಪಡೆದರು.


ಅತೀ ಸಣ್ಣ ವಯಸ್ಸಿನಲ್ಲಿ ತುಳು ರಂಗಭೂಮಿ ಪ್ರವೇಶಿಸಿದರು. ನಾಯಕಿ ನಟಿಯಾಗಿ ನಟನೆಯಲ್ಲೂ ಎತ್ತಿದ ಕೈ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಖಾಸಗಿ ಟಿವಿ ವಾಹಿನಿಯಲ್ಲಿ ನಿರೂಪಕಿಯಾಗಿ ಕಾರ್ಯ ನಿರ್ವಹಿಸಿದರು.

ಈಕೆ ಕೆ.ಪ್ರಕಾಶ್ ಹಾಗೂ ಗೀತಾ ದಂಪತಿಯ ಏಕೈಕ ಪುತ್ರಿ. ಪ್ರಸ್ತುತ ಅವರು ಎ. ಜೆ. ಸಂಸ್ಥೆಯಲ್ಲಿ  ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತನ್ನ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ನಟನೆಯಿಂದ ದೂರ ಸರಿದಿದ್ದಾರೆ.


ಬೇರೆ ಭಾಷೆಗಳಲ್ಲಿ ನಟನೆ ಮಾಡುವ ಆಸಕ್ತಿ ಸದ್ಯಕ್ಕಿಲ್ಲ. ತುಳು ಭಾಷೆಯ ಮೇಲೆ ಅಭಿಮಾನ ಮತ್ತು ಪ್ರೀತಿ ಇದೆ. ಹಾಗಾಗಿ ಅವಕಾಶ ಸಿಕ್ಕಾಗ ಬಳಸಿಕೊಂಡೆ. ನಟಿಯಾಗಬೇಕೆಂಬ ಕನಸು ಯಾವತ್ತು ಕಂಡಿಲ್ಲ. ಕಾಲೇಜು ಜೀವನದಲ್ಲಿ ನಟನೆಯಿಂದ ಬರುತ್ತಿದ್ದ ಹಣ ನನ್ನ ವಿದ್ಯಾಭ್ಯಾಸಕ್ಕೆ ಸಹಾಯವಾಗುತ್ತಿತ್ತು. ಮೊದಲು ಓದಿಗೆ ಪ್ರಾಮುಖ್ಯತೆ, ಆಮೇಲೆ ಇತರ ವಿಷಯಕ್ಕೆ ಎಂದು ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ಅವರು ನುಡಿದರು.

ನನ್ನ ತಂದೆ-ತಾಯಿ ಯಾವತ್ತು ಒತ್ತಡ ಮಾಡಿಲ್ಲ ಇಷ್ಟೇ ಅಂಕ ಗಳಿಸಬೇಕು ಅಥವಾ ಇದೇ ಫೀಲ್ಡಿಗೆ ಹೋಗಬೇಕು ಎಂದು ಒತ್ತಡ ಹೇರಿಲ್ಲ.


ಯಾವುದೇ ರಂಗಕ್ಕೆ ಹೋಗು ನಮ್ಮ ಸಹಾಯ ಇದೆ ಎಂದು ಇವತ್ತಿಗೂ ಬೆನ್ನು ತಟ್ಟುತ್ತಿರುವ ತಂದೆ-ತಾಯಿಯೇ ನನಗೆ ಸ್ಪೂರ್ತಿ ಎಂದು ಶೀತಲ್ ಹೇಳುತ್ತಾರೆ. ನನಗೆ ಸಹಕಾರ ನೀಡಿದ ಎಲ್ಲಾ ಶಿಕ್ಷಕರಿಗೂ ಹಾಗೂ ನನಗೆ ಹಾರೈಸಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ.



ದಬಕ್ ದಬ ಐಸಾ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ಮೆಹಂದಿ ಆರ್ಟಿಸ್ಟ್, ಡ್ಯಾನ್ಸರ್ ಕೂಡ ಹೌದು.

ಇತ್ತೀಚಿನ ಸುದ್ದಿ

ಜಾಹೀರಾತು