11:26 PM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ತಿರುಗಿ ನೋಡದ ವಸತಿ ಸಚಿವರು: ಅರ್ಧಕ್ಕೆ ನಿಂತ ಆಶ್ರಯ ಮನೆ; ರಾಜ್ಯದಲ್ಲಿ ಬಡವರ ಗೋಳು ಕೇಳುವವರೇ ಇಲ್ಲ! 

13/06/2021, 18:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮೊದಲೇ ಕೋವಿಡ್ ಲಾಕ್ ಡೌನ್ ನಿಂದ ತತ್ತರಿಸಿ ಹೋಗಿರುವ ಬಡವರ ಗೋಳು ಕೇಳುವವರೇ ಇಲ್ಲ ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ಉದ್ಭವಿಸಿದೆ. ಬಡವರಿಗೆ ಸರಕಾರ ಕಟ್ಟಿ ಕೊಡುವ ಆಶ್ರಯ ಮನೆಗಳ ಕಾಮಗಾರಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅದಲ್ಲದೆ ಇತ್ತೀಚಿನ ದಿನಗಳಲ್ಲಿ ಬಡವರಿಗಾಗಿ ಯಾವುದೇ ಆಶ್ರಯ, ಬಸವ ವಸತಿ ಯೋಜನೆ ಮನೆಗಳು ಬಿಡುಗಡೆಯಾಗುತ್ತಿಲ್ಲ. ಬಡವರನ್ನು ಕೇಳುವವರೇ ಇಲ್ಲದಂತಾಗಿದೆ.

ಮಸ್ಕಿ ಉಪ ಚುನಾವಣೆ ಸಂದರ್ಭದಲ್ಲಿ ವಸತಿ ಸಚಿವ ಸೋಮಣ್ಣ ಅವರು ಈಗಾಗಲೇ 600 ಮನೆಗಳು ಮಸ್ಕಿ ಕ್ಷೇತ್ರಕ್ಕೆ ಬಂದಿದೆ ಎಂದು ಹೇಳಿ ಮತದಾರರ  ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದರು. ಆದರೆ ಬಿಡುಗಡೆಯಾದ ಆಶ್ರಯ ಮನೆಗಳ ಕಾಮಗಾರಿಯೇ ಇನ್ನೂ ಪೂರ್ಣಗೊಂಡಿಲ್ಲ.

ಆಡಳಿತದ ಪಕ್ಷದ ಶಾಸಕರು, ಸಚಿವರುಗಳು ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆಯೇ ಹೊರತು ಜನರ ಕಲ್ಯಾಣದ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಮಸ್ಕಿಯ ಜನತೆ ದೂರುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರ ಬಡವರ ಬಗ್ಗೆ ಗಮನಹರಿಸಿ ನಿರ್ಗತಿಕರಿಗೆ, ಬಡವರಿಗೆ  ಹಾಗೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಜನತಾ ಮನೆಗಳ ನೀಡಬೇಕು. ಅದು ಬಿಟ್ಟು ಸರಕಾರದ ಖಜಾನೆಯಲ್ಲಿ ಹಣ ಇಲ್ಲ. ಕೋವಿಡ್ ಇದೆ ಎಂದು ವಿಷಯಾಂತರ ಮಾಡುತ್ತಿದೆ. ಹೀಗಾದರೆ ಬಡವರ ಬದುಕು ಹೇಗೆ ಸಾಗಿಸಬೇಕು ಎಂದು ಜನಸಾಮಾನ್ಯರು oಆಡಿಕೊಳ್ಳುತ್ತಿದ್ದಾರೆ.

ಸಂಬಂಧಪಟ್ಟ ಸಚಿವರು, ಮುಖ್ಯಮಂತ್ರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು