5:40 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ತಿರುಗಿ ನೋಡದ ವಸತಿ ಸಚಿವರು: ಅರ್ಧಕ್ಕೆ ನಿಂತ ಆಶ್ರಯ ಮನೆ; ರಾಜ್ಯದಲ್ಲಿ ಬಡವರ ಗೋಳು ಕೇಳುವವರೇ ಇಲ್ಲ! 

13/06/2021, 18:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮೊದಲೇ ಕೋವಿಡ್ ಲಾಕ್ ಡೌನ್ ನಿಂದ ತತ್ತರಿಸಿ ಹೋಗಿರುವ ಬಡವರ ಗೋಳು ಕೇಳುವವರೇ ಇಲ್ಲ ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ಉದ್ಭವಿಸಿದೆ. ಬಡವರಿಗೆ ಸರಕಾರ ಕಟ್ಟಿ ಕೊಡುವ ಆಶ್ರಯ ಮನೆಗಳ ಕಾಮಗಾರಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅದಲ್ಲದೆ ಇತ್ತೀಚಿನ ದಿನಗಳಲ್ಲಿ ಬಡವರಿಗಾಗಿ ಯಾವುದೇ ಆಶ್ರಯ, ಬಸವ ವಸತಿ ಯೋಜನೆ ಮನೆಗಳು ಬಿಡುಗಡೆಯಾಗುತ್ತಿಲ್ಲ. ಬಡವರನ್ನು ಕೇಳುವವರೇ ಇಲ್ಲದಂತಾಗಿದೆ.

ಮಸ್ಕಿ ಉಪ ಚುನಾವಣೆ ಸಂದರ್ಭದಲ್ಲಿ ವಸತಿ ಸಚಿವ ಸೋಮಣ್ಣ ಅವರು ಈಗಾಗಲೇ 600 ಮನೆಗಳು ಮಸ್ಕಿ ಕ್ಷೇತ್ರಕ್ಕೆ ಬಂದಿದೆ ಎಂದು ಹೇಳಿ ಮತದಾರರ  ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದರು. ಆದರೆ ಬಿಡುಗಡೆಯಾದ ಆಶ್ರಯ ಮನೆಗಳ ಕಾಮಗಾರಿಯೇ ಇನ್ನೂ ಪೂರ್ಣಗೊಂಡಿಲ್ಲ.

ಆಡಳಿತದ ಪಕ್ಷದ ಶಾಸಕರು, ಸಚಿವರುಗಳು ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆಯೇ ಹೊರತು ಜನರ ಕಲ್ಯಾಣದ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಮಸ್ಕಿಯ ಜನತೆ ದೂರುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರ ಬಡವರ ಬಗ್ಗೆ ಗಮನಹರಿಸಿ ನಿರ್ಗತಿಕರಿಗೆ, ಬಡವರಿಗೆ  ಹಾಗೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಜನತಾ ಮನೆಗಳ ನೀಡಬೇಕು. ಅದು ಬಿಟ್ಟು ಸರಕಾರದ ಖಜಾನೆಯಲ್ಲಿ ಹಣ ಇಲ್ಲ. ಕೋವಿಡ್ ಇದೆ ಎಂದು ವಿಷಯಾಂತರ ಮಾಡುತ್ತಿದೆ. ಹೀಗಾದರೆ ಬಡವರ ಬದುಕು ಹೇಗೆ ಸಾಗಿಸಬೇಕು ಎಂದು ಜನಸಾಮಾನ್ಯರು oಆಡಿಕೊಳ್ಳುತ್ತಿದ್ದಾರೆ.

ಸಂಬಂಧಪಟ್ಟ ಸಚಿವರು, ಮುಖ್ಯಮಂತ್ರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು