1:28 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ತಿರುಗಿ ನೋಡದ ವಸತಿ ಸಚಿವರು: ಅರ್ಧಕ್ಕೆ ನಿಂತ ಆಶ್ರಯ ಮನೆ; ರಾಜ್ಯದಲ್ಲಿ ಬಡವರ ಗೋಳು ಕೇಳುವವರೇ ಇಲ್ಲ! 

13/06/2021, 18:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮೊದಲೇ ಕೋವಿಡ್ ಲಾಕ್ ಡೌನ್ ನಿಂದ ತತ್ತರಿಸಿ ಹೋಗಿರುವ ಬಡವರ ಗೋಳು ಕೇಳುವವರೇ ಇಲ್ಲ ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ಉದ್ಭವಿಸಿದೆ. ಬಡವರಿಗೆ ಸರಕಾರ ಕಟ್ಟಿ ಕೊಡುವ ಆಶ್ರಯ ಮನೆಗಳ ಕಾಮಗಾರಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅದಲ್ಲದೆ ಇತ್ತೀಚಿನ ದಿನಗಳಲ್ಲಿ ಬಡವರಿಗಾಗಿ ಯಾವುದೇ ಆಶ್ರಯ, ಬಸವ ವಸತಿ ಯೋಜನೆ ಮನೆಗಳು ಬಿಡುಗಡೆಯಾಗುತ್ತಿಲ್ಲ. ಬಡವರನ್ನು ಕೇಳುವವರೇ ಇಲ್ಲದಂತಾಗಿದೆ.

ಮಸ್ಕಿ ಉಪ ಚುನಾವಣೆ ಸಂದರ್ಭದಲ್ಲಿ ವಸತಿ ಸಚಿವ ಸೋಮಣ್ಣ ಅವರು ಈಗಾಗಲೇ 600 ಮನೆಗಳು ಮಸ್ಕಿ ಕ್ಷೇತ್ರಕ್ಕೆ ಬಂದಿದೆ ಎಂದು ಹೇಳಿ ಮತದಾರರ  ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದರು. ಆದರೆ ಬಿಡುಗಡೆಯಾದ ಆಶ್ರಯ ಮನೆಗಳ ಕಾಮಗಾರಿಯೇ ಇನ್ನೂ ಪೂರ್ಣಗೊಂಡಿಲ್ಲ.

ಆಡಳಿತದ ಪಕ್ಷದ ಶಾಸಕರು, ಸಚಿವರುಗಳು ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆಯೇ ಹೊರತು ಜನರ ಕಲ್ಯಾಣದ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಮಸ್ಕಿಯ ಜನತೆ ದೂರುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರ ಬಡವರ ಬಗ್ಗೆ ಗಮನಹರಿಸಿ ನಿರ್ಗತಿಕರಿಗೆ, ಬಡವರಿಗೆ  ಹಾಗೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಜನತಾ ಮನೆಗಳ ನೀಡಬೇಕು. ಅದು ಬಿಟ್ಟು ಸರಕಾರದ ಖಜಾನೆಯಲ್ಲಿ ಹಣ ಇಲ್ಲ. ಕೋವಿಡ್ ಇದೆ ಎಂದು ವಿಷಯಾಂತರ ಮಾಡುತ್ತಿದೆ. ಹೀಗಾದರೆ ಬಡವರ ಬದುಕು ಹೇಗೆ ಸಾಗಿಸಬೇಕು ಎಂದು ಜನಸಾಮಾನ್ಯರು oಆಡಿಕೊಳ್ಳುತ್ತಿದ್ದಾರೆ.

ಸಂಬಂಧಪಟ್ಟ ಸಚಿವರು, ಮುಖ್ಯಮಂತ್ರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು