7:15 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ತಿರುಗಿ ನೋಡದ ವಸತಿ ಸಚಿವರು: ಅರ್ಧಕ್ಕೆ ನಿಂತ ಆಶ್ರಯ ಮನೆ; ರಾಜ್ಯದಲ್ಲಿ ಬಡವರ ಗೋಳು ಕೇಳುವವರೇ ಇಲ್ಲ! 

13/06/2021, 18:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮೊದಲೇ ಕೋವಿಡ್ ಲಾಕ್ ಡೌನ್ ನಿಂದ ತತ್ತರಿಸಿ ಹೋಗಿರುವ ಬಡವರ ಗೋಳು ಕೇಳುವವರೇ ಇಲ್ಲ ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ಉದ್ಭವಿಸಿದೆ. ಬಡವರಿಗೆ ಸರಕಾರ ಕಟ್ಟಿ ಕೊಡುವ ಆಶ್ರಯ ಮನೆಗಳ ಕಾಮಗಾರಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅದಲ್ಲದೆ ಇತ್ತೀಚಿನ ದಿನಗಳಲ್ಲಿ ಬಡವರಿಗಾಗಿ ಯಾವುದೇ ಆಶ್ರಯ, ಬಸವ ವಸತಿ ಯೋಜನೆ ಮನೆಗಳು ಬಿಡುಗಡೆಯಾಗುತ್ತಿಲ್ಲ. ಬಡವರನ್ನು ಕೇಳುವವರೇ ಇಲ್ಲದಂತಾಗಿದೆ.

ಮಸ್ಕಿ ಉಪ ಚುನಾವಣೆ ಸಂದರ್ಭದಲ್ಲಿ ವಸತಿ ಸಚಿವ ಸೋಮಣ್ಣ ಅವರು ಈಗಾಗಲೇ 600 ಮನೆಗಳು ಮಸ್ಕಿ ಕ್ಷೇತ್ರಕ್ಕೆ ಬಂದಿದೆ ಎಂದು ಹೇಳಿ ಮತದಾರರ  ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದರು. ಆದರೆ ಬಿಡುಗಡೆಯಾದ ಆಶ್ರಯ ಮನೆಗಳ ಕಾಮಗಾರಿಯೇ ಇನ್ನೂ ಪೂರ್ಣಗೊಂಡಿಲ್ಲ.

ಆಡಳಿತದ ಪಕ್ಷದ ಶಾಸಕರು, ಸಚಿವರುಗಳು ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆಯೇ ಹೊರತು ಜನರ ಕಲ್ಯಾಣದ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಮಸ್ಕಿಯ ಜನತೆ ದೂರುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರ ಬಡವರ ಬಗ್ಗೆ ಗಮನಹರಿಸಿ ನಿರ್ಗತಿಕರಿಗೆ, ಬಡವರಿಗೆ  ಹಾಗೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಜನತಾ ಮನೆಗಳ ನೀಡಬೇಕು. ಅದು ಬಿಟ್ಟು ಸರಕಾರದ ಖಜಾನೆಯಲ್ಲಿ ಹಣ ಇಲ್ಲ. ಕೋವಿಡ್ ಇದೆ ಎಂದು ವಿಷಯಾಂತರ ಮಾಡುತ್ತಿದೆ. ಹೀಗಾದರೆ ಬಡವರ ಬದುಕು ಹೇಗೆ ಸಾಗಿಸಬೇಕು ಎಂದು ಜನಸಾಮಾನ್ಯರು oಆಡಿಕೊಳ್ಳುತ್ತಿದ್ದಾರೆ.

ಸಂಬಂಧಪಟ್ಟ ಸಚಿವರು, ಮುಖ್ಯಮಂತ್ರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು