9:52 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮಾನ್ವಿಗಾಗಿ ಸ್ಟೆಮ್ ಸೆಲ್ ಅಭಿಯಾನ: ಸ್ವಯಂ ಪ್ರೇರಿತರಾಗಿ ಸಲೈವ ನೀಡಿದ ಕರಾವಳಿಗರು!! 

18/04/2022, 21:28

ಮಂಗಳೂರು(reporterkarnataka.com) ಕಾರ್ಕಳದ ಆರು ವರ್ಷದ ಮಗು ಮಾನ್ವಿ ಕಾಮತ್ ಅಪರೂಪದ ಅನುವಶೀಯ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಅವಳನ್ನು ಬದುಕಿಸಲು ಆರೋಗ್ಯವಂತ ವ್ಯಕ್ತಿಯ ದೇಹದೊಳಗಿನ ಕಾಂಡ ಕೋಶ {ಸ್ಟೆಮ್ ಸೆಲ್}ಅಗತ್ಯವಿದ್ದು, ಅದಕ್ಕಾಗಿ ಮಂಗಳೂರಿನ ಎರಡು ಕಡೆ ಭಾನುವಾರ ಸ್ಟೆಮ್ ಸೆಲ್ ಅಭಿಯಾನ ಕೈಗೊಳ್ಳಲಾಯಿತು. ಬೆಳಿಗ್ಗೆ ಮಂಗಳೂರಿನ ಭಾರತ್ ಮಾಲ್ ಮತ್ತು ಸಂಜೆ ಕದ್ರಿ ಪಾರ್ಕಿನಲ್ಲಿ ಯೂತ್ ಆಫ್ ಜಿಎಸ್ ಬಿ ಕಾರ್ಯಕರ್ತರು ಡಿಕೆಎಂಎಸ್ ಬಿಎಂಎಸ್ ಟಿ ಸಹಯೋಗದಲ್ಲಿ ಅಭಿಯಾನ ನಡೆಸಿದರು. ನಮ್ಮ ಬಾಯೊಳಗಿನ ಸಲೈವಾ ತೆಗೆದುಕೊಂಡು ಅದನ್ನು ಜರ್ಮನಿಗೆ ಕಳುಹಿಸಿ ಅಲ್ಲಿ ಪರೀಕ್ಷೆಗೆ ಒಳಪಡಿಸಿ ಅದು ಮಗುವಿನ ದೇಹಕ್ಕೆ ಹೊಂದಾಣಿಕೆಯಾದರೆ ಮುಂದಿನ ವೈದ್ಯಕೀಯ ಪ್ರಕ್ರಿಯೆಗಳನ್ನು ಮಾಡಿ ಮಾನ್ವಿಯನ್ನು ಉಳಿಸಬಹುದು ಎಂದು ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿದರು.


ಹಲವಾರು ಜನ ಸ್ವಯಂಪ್ರೇರಿತರಾಗಿ ಮುಂದೆ ಬಂದು ಸಲೈವ ನೀಡಿ ಮಾದರಿ ಕಾರ್ಯದಲ್ಲಿ ಸಹಕರಿಸಿದರು. ಅಭಿಯಾನದಲ್ಲಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟಿನ ಮಂಗಲ್ಪಾಡಿ ನರೇಶ್ ಶೆಣೈ, ಹನುಮಂತ ಕಾಮತ್, ಡಿಕೆಎಂಎಸ್ ಸರಕಾರೇತರ ಸಂಸ್ಥೆಯ ಅಖಿಲಾ, ಮಹಾಮಿತ್ರ, ಯೂತ್ ಆಪ್ ಜಿಎಸ್ ಬಿಯ ಕಿರಣ್ ಶೆಣೈ, ನಾಗೇಂದ್ರ ಶೆಣೈ, ಸಂತೋಷ್ ಶೆಣೈ ಸಹಿತ ಹಲವಾರು ಸ್ವಯಂಸೇವಕರು ಭಾಗವಹಿಸಿದರು. ಮಂಗಳೂರಿನ ಟ್ರಾಫಿಕ್ ಎಸಿಪಿ ನಾಗರಾಜ್, ಮಂಗಳೂರಿನ ವಕೀಲರ ಪರಿಷತ್ತಿನ ರಾಘವೇಂದ್ರ ಸಹಿತ ಹಲವಾರು ಗಣ್ಯರು ಆಗಮಿಸಿ ಅಭಿಯಾನದಲ್ಲಿ ಭಾಗವಹಿಸಿದರು. ಈ ಅಭಿಯಾನ ಮುಂದಿನ ತಿಂಗಳು ಮಂಗಳೂರಿನ ಹಲವಾರು ಕಡೆ ನಡೆಯಲಿದ್ದು, ನಾಗರಿಕರು ಮಗುವಿನ ಜೀವ ಉಳಿಸಲು ಸಹಕರಿಸಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು