1:30 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಮಠಗಳ ಅನುದಾನದಲ್ಲಿ ಪರ್ಸೆಂಟೇಜ್ ಆರೋಪ: ಮಠಾಧೀಶರು ದಾಖಲೆ ಕೊಟ್ಟರೆ ತನಿಖ: ಸಿಎಂ ಬೊಮ್ಮಾಯಿ

18/04/2022, 23:43

ಬೆಂಗಳೂರು(reporterkarnataka.com): ಬಾಳೆಹೊಸೂರು ಮಠದ ದಿಂಗಾಲೇಶ್ವರ ಶ್ರೀಗಳ 30 ಪರ್ಸೆಂಟ್‌ ಕಮಿಷನ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಾವ ಮಠಾಧೀಶರು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್‌ ಕೊಟ್ಟಿದ್ದಾರೆ ದಾಖಲೆ ನೀಡಲಿ ತನಿಖೆ ಮಾಡುತ್ತೇವೆ’ ಎಂದರು.

ದಿಂಗಾಲೇಶ್ವರ ಸ್ವಾಮೀಜಿಗಳ ಮಾತಿಗೆ ಬೆಲೆ ಕೊಡುತ್ತೇವೆ.ಯಾವ ಮಠಾಧೀಶರು ಯಾರಿಗೆ ಕೊಟ್ಟಿದ್ದಾರೆ ದಾಖಲೆ ನೀಡಲಿ. ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್‌ ಕೊಟ್ಟಿದ್ದಾರೆ ದಾಖಲೆ ಕೊಡಲಿ. ದಾಖಲೆ ನೀಡದರೆ ಈ ಕುರಿತು ಸಂಪೂರ್ಣ ತನಿಖೆ ಮಾಡ್ತೇವೆ. ಅದರ ಆಳಕ್ಕೆ ಹೋಗ್ತೇವೆ, ಸಂಪೂರ್ಣ ತನಿಖೆ ಮಾಡುತ್ತೇವೆ ಎಂದರು.

ಮಠಗಳಿಗೆ ಬರುವ ಅನುದಾನದಲ್ಲೂ 30% ಕಮಿಷನ್‌ ಕೊಟ್ಟರಷ್ಟೇ ಅನುದಾನ ಬಿಡುಗಡೆ ಮಾಡುತ್ತಾರೆ. ಇದು ಬಿಜೆಪಿ ಸರ್ಕಾರ ಮಾತ್ರವಲ್ಲ ಎಲ್ಲಾ ಸರ್ಕಾರದಲ್ಲೂ ಇದೇ ಪರಿಸ್ಥಿತಿ ಇದೆ. ಕಮಿಷನ್‌ ಕಟ್‌ ಮಾಡಿಯೇ ಕೊಡುತ್ತಾರೆ. ಮಠದ ಅನುದಾನದಲ್ಲೂ ಕಮಿಷನ್‌ ಕೇಳುತ್ತಾರೆ. ಅನುದಾನದಲ್ಲೂ ಪರ್ಸೆಂಟೇಜ್‌ ಕೊಡಬೇಕು. ಎನ್‌ ಓಸಿಗೂ ಕಮಿಷನ್‌ ಕೊಡಬೇಕು. ಭೂಮಿ ಪೂಜೆಗೂ ಕಮಿಷನ್‌ ಕೊಡಬೇಕು . ಇದರ ಜತೆಗೆ ಯಾಕೆ ಹಣ ಕೊಟ್ಟಿಲ್ಲ ಎಂದು ದೌರ್ಜನ್ಯ ಮಾಡುತ್ತಾರೆಂದು ಗಂಭೀರವಾಗಿ ಬಾಲೇ ಹೊಸೂರು ಮಠದ ದಿಂಗಾಲೇಶ್ವರ ಶ್ರೀಗಳು ಅರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು