12:38 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಮಠಗಳ ಅನುದಾನದಲ್ಲಿ ಪರ್ಸೆಂಟೇಜ್ ಆರೋಪ: ಮಠಾಧೀಶರು ದಾಖಲೆ ಕೊಟ್ಟರೆ ತನಿಖ: ಸಿಎಂ ಬೊಮ್ಮಾಯಿ

18/04/2022, 23:43

ಬೆಂಗಳೂರು(reporterkarnataka.com): ಬಾಳೆಹೊಸೂರು ಮಠದ ದಿಂಗಾಲೇಶ್ವರ ಶ್ರೀಗಳ 30 ಪರ್ಸೆಂಟ್‌ ಕಮಿಷನ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಾವ ಮಠಾಧೀಶರು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್‌ ಕೊಟ್ಟಿದ್ದಾರೆ ದಾಖಲೆ ನೀಡಲಿ ತನಿಖೆ ಮಾಡುತ್ತೇವೆ’ ಎಂದರು.

ದಿಂಗಾಲೇಶ್ವರ ಸ್ವಾಮೀಜಿಗಳ ಮಾತಿಗೆ ಬೆಲೆ ಕೊಡುತ್ತೇವೆ.ಯಾವ ಮಠಾಧೀಶರು ಯಾರಿಗೆ ಕೊಟ್ಟಿದ್ದಾರೆ ದಾಖಲೆ ನೀಡಲಿ. ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್‌ ಕೊಟ್ಟಿದ್ದಾರೆ ದಾಖಲೆ ಕೊಡಲಿ. ದಾಖಲೆ ನೀಡದರೆ ಈ ಕುರಿತು ಸಂಪೂರ್ಣ ತನಿಖೆ ಮಾಡ್ತೇವೆ. ಅದರ ಆಳಕ್ಕೆ ಹೋಗ್ತೇವೆ, ಸಂಪೂರ್ಣ ತನಿಖೆ ಮಾಡುತ್ತೇವೆ ಎಂದರು.

ಮಠಗಳಿಗೆ ಬರುವ ಅನುದಾನದಲ್ಲೂ 30% ಕಮಿಷನ್‌ ಕೊಟ್ಟರಷ್ಟೇ ಅನುದಾನ ಬಿಡುಗಡೆ ಮಾಡುತ್ತಾರೆ. ಇದು ಬಿಜೆಪಿ ಸರ್ಕಾರ ಮಾತ್ರವಲ್ಲ ಎಲ್ಲಾ ಸರ್ಕಾರದಲ್ಲೂ ಇದೇ ಪರಿಸ್ಥಿತಿ ಇದೆ. ಕಮಿಷನ್‌ ಕಟ್‌ ಮಾಡಿಯೇ ಕೊಡುತ್ತಾರೆ. ಮಠದ ಅನುದಾನದಲ್ಲೂ ಕಮಿಷನ್‌ ಕೇಳುತ್ತಾರೆ. ಅನುದಾನದಲ್ಲೂ ಪರ್ಸೆಂಟೇಜ್‌ ಕೊಡಬೇಕು. ಎನ್‌ ಓಸಿಗೂ ಕಮಿಷನ್‌ ಕೊಡಬೇಕು. ಭೂಮಿ ಪೂಜೆಗೂ ಕಮಿಷನ್‌ ಕೊಡಬೇಕು . ಇದರ ಜತೆಗೆ ಯಾಕೆ ಹಣ ಕೊಟ್ಟಿಲ್ಲ ಎಂದು ದೌರ್ಜನ್ಯ ಮಾಡುತ್ತಾರೆಂದು ಗಂಭೀರವಾಗಿ ಬಾಲೇ ಹೊಸೂರು ಮಠದ ದಿಂಗಾಲೇಶ್ವರ ಶ್ರೀಗಳು ಅರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು