10:35 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಠಗಳ ಅನುದಾನದಲ್ಲಿ ಪರ್ಸೆಂಟೇಜ್ ಆರೋಪ: ಮಠಾಧೀಶರು ದಾಖಲೆ ಕೊಟ್ಟರೆ ತನಿಖ: ಸಿಎಂ ಬೊಮ್ಮಾಯಿ

18/04/2022, 23:43

ಬೆಂಗಳೂರು(reporterkarnataka.com): ಬಾಳೆಹೊಸೂರು ಮಠದ ದಿಂಗಾಲೇಶ್ವರ ಶ್ರೀಗಳ 30 ಪರ್ಸೆಂಟ್‌ ಕಮಿಷನ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಾವ ಮಠಾಧೀಶರು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್‌ ಕೊಟ್ಟಿದ್ದಾರೆ ದಾಖಲೆ ನೀಡಲಿ ತನಿಖೆ ಮಾಡುತ್ತೇವೆ’ ಎಂದರು.

ದಿಂಗಾಲೇಶ್ವರ ಸ್ವಾಮೀಜಿಗಳ ಮಾತಿಗೆ ಬೆಲೆ ಕೊಡುತ್ತೇವೆ.ಯಾವ ಮಠಾಧೀಶರು ಯಾರಿಗೆ ಕೊಟ್ಟಿದ್ದಾರೆ ದಾಖಲೆ ನೀಡಲಿ. ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್‌ ಕೊಟ್ಟಿದ್ದಾರೆ ದಾಖಲೆ ಕೊಡಲಿ. ದಾಖಲೆ ನೀಡದರೆ ಈ ಕುರಿತು ಸಂಪೂರ್ಣ ತನಿಖೆ ಮಾಡ್ತೇವೆ. ಅದರ ಆಳಕ್ಕೆ ಹೋಗ್ತೇವೆ, ಸಂಪೂರ್ಣ ತನಿಖೆ ಮಾಡುತ್ತೇವೆ ಎಂದರು.

ಮಠಗಳಿಗೆ ಬರುವ ಅನುದಾನದಲ್ಲೂ 30% ಕಮಿಷನ್‌ ಕೊಟ್ಟರಷ್ಟೇ ಅನುದಾನ ಬಿಡುಗಡೆ ಮಾಡುತ್ತಾರೆ. ಇದು ಬಿಜೆಪಿ ಸರ್ಕಾರ ಮಾತ್ರವಲ್ಲ ಎಲ್ಲಾ ಸರ್ಕಾರದಲ್ಲೂ ಇದೇ ಪರಿಸ್ಥಿತಿ ಇದೆ. ಕಮಿಷನ್‌ ಕಟ್‌ ಮಾಡಿಯೇ ಕೊಡುತ್ತಾರೆ. ಮಠದ ಅನುದಾನದಲ್ಲೂ ಕಮಿಷನ್‌ ಕೇಳುತ್ತಾರೆ. ಅನುದಾನದಲ್ಲೂ ಪರ್ಸೆಂಟೇಜ್‌ ಕೊಡಬೇಕು. ಎನ್‌ ಓಸಿಗೂ ಕಮಿಷನ್‌ ಕೊಡಬೇಕು. ಭೂಮಿ ಪೂಜೆಗೂ ಕಮಿಷನ್‌ ಕೊಡಬೇಕು . ಇದರ ಜತೆಗೆ ಯಾಕೆ ಹಣ ಕೊಟ್ಟಿಲ್ಲ ಎಂದು ದೌರ್ಜನ್ಯ ಮಾಡುತ್ತಾರೆಂದು ಗಂಭೀರವಾಗಿ ಬಾಲೇ ಹೊಸೂರು ಮಠದ ದಿಂಗಾಲೇಶ್ವರ ಶ್ರೀಗಳು ಅರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು