6:38 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್‌ ಮನೋಜ್‌ ಪಾಂಡೆ ನೇಮಕ

18/04/2022, 23:53

ಹೊಸದಿಲ್ಲಿ(reporterkarnataka.com): ಭಾರತದ ನೂತನ ಸೇನಾ ಮುಖ್ಯಸ್ಥರನ್ನಾಗಿ 
ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ನೇಮಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. 

ಪಾಂಡೆ ಅವರು ಇದುವರೆಗೆ ಸೇನಾ ಸಿಬ್ಬಂದಿಯ ಉಪಾಧ್ಯಕ್ಷ ಸ್ಥಾನವನ್ನು ನಿರ್ವಹಿಸುತ್ತಿದ್ದರು.

ಅದಕ್ಕೂ ಮೊದಲು ಪಾಂಡೆ ಅವರು ಪೂರ್ವ ಸೇನಾ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ. 31 ಡಿಸೆಂಬರ್ 2021 ರಂದು ಸೇನಾ ಮುಖ್ಯಸ್ಥರಾಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಜನರಲ್‌ ಮನೋಜ್‌ ಮುಕುಂದ್ ನರವಾಣೆ ಅವರು ಏಪ್ರಿಲ್ 2022ರಲ್ಲಿ ನಿವೃತ್ತರಾಗಲಿದ್ದಾರೆ.

ಇಂಜಿನಿಯರ್ ಆಗಿರುವ ಲೆಫ್ಟಿನೆಂಟ್ ಜನರಲ್ ಪಾಂಡೆ ಅವರು ಜನರಲ್ ನರವಾಣೆ ನಂತರ ಸೇನೆಯಲ್ಲಿ ಅತ್ಯಂತ ಹಿರಿಯರಾಗಿರುವ ಅಧಿಕಾರಿಯಾಗಿದ್ದು, ಆಡಳಿತವನ್ನು ವಹಿಸಿಕೊಳ್ಳಲಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಕೆಲವು ಉನ್ನತ ಅಧಿಕಾರಿಗಳು ನಿವೃತ್ತರಾಗಿದ್ದು ಪಾಂಡೆಯವರು ಈಗ ಹಿರಿತನವನ್ನು ಹೊಂದಿದ್ದಾರೆ.

ಸೇನೆಯ ತರಬೇತಿ ಕಮಾಂಡರ್ ಆಗಿದ್ದ ಲೆಫ್ಟಿನೆಂಟ್ ಜನರಲ್ ರಾಜ್ ಶುಕ್ಲಾ ಅವರು ಮಾರ್ಚ್ 31ರಂದು ನಿವೃತ್ತರಾಗಿದ್ದರು. ಕೆಲವು ಹಿರಿಯ ನಾಯಕರು ಜನವರಿ ಅಂತ್ಯದ ವೇಳೆಗೆ ರಿಟೈರ್‌ ಆಗಿದ್ದಾರೆ. ಲೆಫ್ಟಿನೆಂಟ್ ಜನರಲ್ ಸಿ.ಪಿ. ಮೊಹಂತಿ ಮತ್ತು ಲೆಫ್ಟಿನೆಂಟ್ ಜನರಲ್ ವೈ.ಕೆ. ಜೋಶಿ ಅವರು ಜನವರಿ 31ರಂದು ನಿವೃತ್ತರಾಗಿದ್ದಾರೆ.

ಪಾಂಡೆ ಅವರು ಕಾರ್ಪ್ಸ್ ಆಫ್ ಇಂಜಿನಿಯರ್ಸ್‌ನಿಂದ ಸೇನಾ ಮುಖ್ಯಸ್ಥರಾಗುವ ಮೊದಲ ಅಧಿಕಾರಿಯಾಗಲಿದ್ದಾರೆ. ಈ ಹುದ್ದೆಯನ್ನು ಇದುವರೆಗೆ ಪದಾತಿ ದಳ, ಶಸ್ತ್ರಸಜ್ಜಿತ ಮತ್ತು ಆರ್ಟಿಲರಿ ಅಧಿಕಾರಿಗಳು ವಹಿಸಿಕೊಳ್ಳುತ್ತಿದ್ದರು ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು