6:03 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ದಿಲ್ಲಿ ಹಿಂಸಾಚಾರ ಪ್ರಕರಣ: ಇಬ್ಬರು ಅಪ್ರಾಪ್ತರು ಸೇರಿದಂತೆ 21 ಮಂದಿ ಬಂಧನ; ಪಿಸ್ತೂಲ್ ವಶ

19/04/2022, 09:55

ಹೊಸದಿಲ್ಲಿ(reporterkarnataka.com): ರಾಷ್ಟ್ರ ರಾಜಧಾನಿ ದೆಹಲಿಯ ಜಹಾಂಗೀರ್ ಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿ 21 ಮಂದಿ ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಹನುಮ ಜಯಂತಿ ಮೆರವಣಿಗೆ ವೇಳೆ ಎರಡು ಸಮುದಾಯಗಳ ನಡುವೆ ಹಿಂಸಾಚಾರದಲ್ಲಿ ಸಬ್ ಇನ್ಸ್‌ಪೆಕ್ಟರ್‌ ಒಬ್ಬರಿಗೆ ಗುಂಡು ಹಾರಿಸಲಾಗಿತ್ತು. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದರು. ಆ ಬಳಿಕ ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳಲ್ಲಿ ಅಪ್ರಾಪ್ತ ಜಹಾಂಗೀರ್ ಪುರಿಯ ಸಿಡಿ ಪಾರ್ಕ್ ನಿವಾಸಿ ಎಂಡಿ ಅಸ್ಲಮ್ ಎಂಬಾತನನ್ನು ವಶಪಡಿಸಿಕೊಳ್ಳಲು ಪೊಲೀಸರು ತೆರಳಿದಾಗ ಆತನ ಬಳಿ ಪಿಸ್ತೂಲ್ ಒಂದು ಪತ್ತೆಯಾಗಿತ್ತು. ಆ ಬಳಿಕ ಪಿಸ್ತೂಲ್ ವಶಪಡಿಸಿಕೊಂಡು ಆತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಕೆಲವು ವಾಹನಗಳಿಗೂ ಬೆಂಕಿ ಹಚ್ಚಲಾಗಿತ್ತು. ಐಪಿಸಿ ಸೆಕ್ಷನ್ 307 (ಕೊಲೆಗೆ ಯತ್ನ) 120 ಬಿ(ಕ್ರಿಮಿನಲ್ ಪಿತೂರಿ) 147 (ಗಲಭೆ) ಶಸ್ತ್ರಾಸ್ತ್ರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಏನಿದು ಘಟನೆ?: ದೆಹಲಿಯ ವಾಯುವ್ಯ ಭಾಗದಲ್ಲಿರುವ ಜಹಾಂಗೀರ್ ಪುರಿಯಲ್ಲಿ ಹನುಮ ಜಯಂತಿ ಶೋಭಾಯಾತ್ರೆಯ ವೇಳೆ ಕಲ್ಲು ತೂರಾಟ ನಡೆದಿತ್ತು. ಇದರಿಂದ ಆರಂಭಗೊಂಡ ಎರಡು ಸಮುದಾಯಗಳ ಘರ್ಷಣೆ ಹಿಂಸಾಚಾರಕ್ಕೆ ತಿರುಗಿತ್ತು. ಬಳಿಕ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು. ಜಹಾಂಗೀರ್ ಪುರಿ ಘಟನೆಯ ನಂತರ ರಾಜ್ಯದಲ್ಲಿ ಆಯಾ ಜಿಲ್ಲೆಗಳ ಸೂಕ್ಷ್ಮ ಪ್ರದೇಶಗಳ ಮೇಲೆ ತೀವ್ರ ನಿಗಾ ವಹಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು