2:35 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಲಿಂಗಸುಗೂರು: ಸಮಾಜ ಕಲ್ಯಾಣ ಇಲಾಖೆ  ಹೊರಗುತ್ತಿಗೆ ಕಾರ್ಮಿಕರಿಗೆ 9 ತಿಂಗಳಿನಿಂದ ಸಂಬಳ ಇಲ್ಲ!

20/04/2022, 20:07

ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka.com

ಒಂದು ತಿಂಗಳು ಸಂಬಳವಾಗದಿದ್ದರೆ ಈ ದುಬಾರಿ ಕಾಲದಲ್ಲಿ ಬದುಕುವುದು ಕಷ್ಟ. ಹಾಗಾದರೆ 9 ತಿಂಗಳಿನಿಂದ ವೇತನ ಕೊಡದಿದ್ದರೆ, ಆ ಕಾರ್ಮಿಕರು ಹೇಗೆ ಬದುಕು ನಡೆಸಬೇಕು? ಇಂತಹದ್ದೊಂದು ಭಯಾನಕ ವಾಸ್ತವ ರಾಯಚೂರು ಜಿಲ್ಲೆಯಿಂದ ವರದಿಯಾಗಿದೆ.

ಲಿಂಗಸುಗೂರು ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ವಸತಿ ನಿಲಯದ ಹೊರಗುತ್ತಿಗೆ ಕಾರ್ಮಿಕರಿಗೆ  9 ತಿಂಗಳಿನ ವೇತನ ನೀಡದೆ ಸತಾಯಿಸಲಾಗುತ್ತಿದೆ.ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಎಆರ್ ಸಿ ಗುತ್ತಿಗೆದಾರರು ನಿರ್ಲಕ್ಷದಿಂದ ವಸತಿ ನಿಲಯದ ಕಾರ್ಮಿಕರು ಬೇಸತ್ತು ಪಟ್ಟಣದ ಸಮಾಜ ಕಲ್ಯಾಣ ಕಾರ್ಯಾಲಯ ಮುಂದೆ ವೇತನಕ್ಕಾಗಿ ಪ್ರತಿಭಟನೆ ನಡೆಸಿದರು. ನಂತರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಬರುವ ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಸುಮಾರು 9 ತಿಂಗಳಿಂದ ವೇತನ ನೀಡಿರುವುದಿಲ್ಲ. ನಮ್ಮ ಕುಟುಂಬ ನಿರ್ವಹಣೆ ಮತ್ತು ನಮ್ಮ ಜೀವನ ತೀರಾ ಕಷ್ಟಕರವಾಗಿರುತ್ತದೆ. 6 ದಿನಗಳೋಳಗಾಗಿ ನಮಗೆ ವೇತನವನ್ನು ನೀಡಬೇಕು. ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು. ಒಂದು ವೇಳೆ ನಮ್ಮ ವೇತನ ನೀಡುವ ವಿಚಾರದಲ್ಲಿ ನಿರ್ಲಕ್ಷ ವಹಿಸಿದರೆ ನಾವುಗಳು ಎಲ್ಲಾ ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರು ಇಲಾಖೆಯ ಮುಂದುಗಡೆ ಅನಿರ್ದಿಷ್ಟವಧಿಯ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಂಘದ ತಾಲೂಕ ಅಧ್ಯಕ್ಷ ದೇವೇಂದ್ರಪ್ಪ ಪಂಜಲರ್, ಚಿನ್ನಪ್ಪ, ಹನುಮರೆಡ್ಡಿ, ಗೌರಮ್ಮ, ರೇಣುಕಮ್ಮ, ಬಸಮ್ಮ, ಕಮಲಬಾಯಿ, ಶಿವಮ್ಮ, ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು