7:23 PM Sunday5 - April 2026
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ

ಇತ್ತೀಚಿನ ಸುದ್ದಿ

ಲಿಂಗಸುಗೂರು: ಸಮಾಜ ಕಲ್ಯಾಣ ಇಲಾಖೆ  ಹೊರಗುತ್ತಿಗೆ ಕಾರ್ಮಿಕರಿಗೆ 9 ತಿಂಗಳಿನಿಂದ ಸಂಬಳ ಇಲ್ಲ!

20/04/2022, 20:07

ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka.com

ಒಂದು ತಿಂಗಳು ಸಂಬಳವಾಗದಿದ್ದರೆ ಈ ದುಬಾರಿ ಕಾಲದಲ್ಲಿ ಬದುಕುವುದು ಕಷ್ಟ. ಹಾಗಾದರೆ 9 ತಿಂಗಳಿನಿಂದ ವೇತನ ಕೊಡದಿದ್ದರೆ, ಆ ಕಾರ್ಮಿಕರು ಹೇಗೆ ಬದುಕು ನಡೆಸಬೇಕು? ಇಂತಹದ್ದೊಂದು ಭಯಾನಕ ವಾಸ್ತವ ರಾಯಚೂರು ಜಿಲ್ಲೆಯಿಂದ ವರದಿಯಾಗಿದೆ.

ಲಿಂಗಸುಗೂರು ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ವಸತಿ ನಿಲಯದ ಹೊರಗುತ್ತಿಗೆ ಕಾರ್ಮಿಕರಿಗೆ  9 ತಿಂಗಳಿನ ವೇತನ ನೀಡದೆ ಸತಾಯಿಸಲಾಗುತ್ತಿದೆ.ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಎಆರ್ ಸಿ ಗುತ್ತಿಗೆದಾರರು ನಿರ್ಲಕ್ಷದಿಂದ ವಸತಿ ನಿಲಯದ ಕಾರ್ಮಿಕರು ಬೇಸತ್ತು ಪಟ್ಟಣದ ಸಮಾಜ ಕಲ್ಯಾಣ ಕಾರ್ಯಾಲಯ ಮುಂದೆ ವೇತನಕ್ಕಾಗಿ ಪ್ರತಿಭಟನೆ ನಡೆಸಿದರು. ನಂತರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಬರುವ ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಸುಮಾರು 9 ತಿಂಗಳಿಂದ ವೇತನ ನೀಡಿರುವುದಿಲ್ಲ. ನಮ್ಮ ಕುಟುಂಬ ನಿರ್ವಹಣೆ ಮತ್ತು ನಮ್ಮ ಜೀವನ ತೀರಾ ಕಷ್ಟಕರವಾಗಿರುತ್ತದೆ. 6 ದಿನಗಳೋಳಗಾಗಿ ನಮಗೆ ವೇತನವನ್ನು ನೀಡಬೇಕು. ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು. ಒಂದು ವೇಳೆ ನಮ್ಮ ವೇತನ ನೀಡುವ ವಿಚಾರದಲ್ಲಿ ನಿರ್ಲಕ್ಷ ವಹಿಸಿದರೆ ನಾವುಗಳು ಎಲ್ಲಾ ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರು ಇಲಾಖೆಯ ಮುಂದುಗಡೆ ಅನಿರ್ದಿಷ್ಟವಧಿಯ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಂಘದ ತಾಲೂಕ ಅಧ್ಯಕ್ಷ ದೇವೇಂದ್ರಪ್ಪ ಪಂಜಲರ್, ಚಿನ್ನಪ್ಪ, ಹನುಮರೆಡ್ಡಿ, ಗೌರಮ್ಮ, ರೇಣುಕಮ್ಮ, ಬಸಮ್ಮ, ಕಮಲಬಾಯಿ, ಶಿವಮ್ಮ, ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು