2:39 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಲಿಂಗಸುಗೂರು: ಸಮಾಜ ಕಲ್ಯಾಣ ಇಲಾಖೆ  ಹೊರಗುತ್ತಿಗೆ ಕಾರ್ಮಿಕರಿಗೆ 9 ತಿಂಗಳಿನಿಂದ ಸಂಬಳ ಇಲ್ಲ!

20/04/2022, 20:07

ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka.com

ಒಂದು ತಿಂಗಳು ಸಂಬಳವಾಗದಿದ್ದರೆ ಈ ದುಬಾರಿ ಕಾಲದಲ್ಲಿ ಬದುಕುವುದು ಕಷ್ಟ. ಹಾಗಾದರೆ 9 ತಿಂಗಳಿನಿಂದ ವೇತನ ಕೊಡದಿದ್ದರೆ, ಆ ಕಾರ್ಮಿಕರು ಹೇಗೆ ಬದುಕು ನಡೆಸಬೇಕು? ಇಂತಹದ್ದೊಂದು ಭಯಾನಕ ವಾಸ್ತವ ರಾಯಚೂರು ಜಿಲ್ಲೆಯಿಂದ ವರದಿಯಾಗಿದೆ.

ಲಿಂಗಸುಗೂರು ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ವಸತಿ ನಿಲಯದ ಹೊರಗುತ್ತಿಗೆ ಕಾರ್ಮಿಕರಿಗೆ  9 ತಿಂಗಳಿನ ವೇತನ ನೀಡದೆ ಸತಾಯಿಸಲಾಗುತ್ತಿದೆ.ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಎಆರ್ ಸಿ ಗುತ್ತಿಗೆದಾರರು ನಿರ್ಲಕ್ಷದಿಂದ ವಸತಿ ನಿಲಯದ ಕಾರ್ಮಿಕರು ಬೇಸತ್ತು ಪಟ್ಟಣದ ಸಮಾಜ ಕಲ್ಯಾಣ ಕಾರ್ಯಾಲಯ ಮುಂದೆ ವೇತನಕ್ಕಾಗಿ ಪ್ರತಿಭಟನೆ ನಡೆಸಿದರು. ನಂತರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಬರುವ ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಸುಮಾರು 9 ತಿಂಗಳಿಂದ ವೇತನ ನೀಡಿರುವುದಿಲ್ಲ. ನಮ್ಮ ಕುಟುಂಬ ನಿರ್ವಹಣೆ ಮತ್ತು ನಮ್ಮ ಜೀವನ ತೀರಾ ಕಷ್ಟಕರವಾಗಿರುತ್ತದೆ. 6 ದಿನಗಳೋಳಗಾಗಿ ನಮಗೆ ವೇತನವನ್ನು ನೀಡಬೇಕು. ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು. ಒಂದು ವೇಳೆ ನಮ್ಮ ವೇತನ ನೀಡುವ ವಿಚಾರದಲ್ಲಿ ನಿರ್ಲಕ್ಷ ವಹಿಸಿದರೆ ನಾವುಗಳು ಎಲ್ಲಾ ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರು ಇಲಾಖೆಯ ಮುಂದುಗಡೆ ಅನಿರ್ದಿಷ್ಟವಧಿಯ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಂಘದ ತಾಲೂಕ ಅಧ್ಯಕ್ಷ ದೇವೇಂದ್ರಪ್ಪ ಪಂಜಲರ್, ಚಿನ್ನಪ್ಪ, ಹನುಮರೆಡ್ಡಿ, ಗೌರಮ್ಮ, ರೇಣುಕಮ್ಮ, ಬಸಮ್ಮ, ಕಮಲಬಾಯಿ, ಶಿವಮ್ಮ, ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು