5:07 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಸೈಕಲ್‌ನಲ್ಲಿ ಆಡುತ್ತಿದ್ದ ಆರು ವರ್ಷದ ಬಾಲಕನ ಮೇಲೆ ಹರಿದ ಟಿಪ್ಪರ್ ; ಬಜಾಲ್‌ನಲ್ಲಿ ನಡೆದ ದುರ್ಘಟನೆ

20/04/2022, 22:10

ಮಂಗಳೂರು(reporterkarnataka.com: ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಆರು ಗಂಟೆ ವೇಳೆಗೆ ನಡೆದಿದೆ.

ಬಜಾಲ್ ಜಲ್ಲಿಗುಡ್ಡೆ ಸಮೀಪದ ಕಟ್ಟಪುಣಿಯ ಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಘಟನೆ ನಡೆದಿದ್ದು, ಬಾಲಕ ಸೈಕಲ್ ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಲಾರಿ ಬಾಲಕನ ಮೇಲಿನಿಂದ ಹರಿದಿದೆ.


ಸ್ಥಳೀಯ ನಿವಾಸಿ ಹಿದಾಯತುಲ್ಲಾ ಎಂಬವರ ಪುತ್ರ ಮೊಹಮ್ಮದ್ ಜೀಶನ್ (6) ಮೃತ ಬಾಲಕ.ಮೊಹಮ್ಮದ್ ಜೀಶನ್ ಮತ್ತು ಇನ್ನೊಬ್ಬ ಬಾಲಕ ಜೊತೆಯಾಗಿ ಅಂಗಡಿಗೆಂದು ಬಂದಿದ್ದು ಒಬ್ಬ ಹುಡುಗ ಇಳಿದು ಹೋಗಿದ್ದಾನೆ ಎನ್ನಲಾಗುತ್ತಿದೆ. ಈ ವೇಳೆ ಸೈಕಲ್ ನಲ್ಲಿದ್ದ ಹುಡುಗನಿಗೆ ಟಿಪ್ಪರ್ ಡಿಕ್ಕಿಯಾಗಿದೆ. ಕಟ್ಟಪುಣಿ ರಸ್ತೆ ಕಿರಿದಾದ ರಸ್ತೆಯಾಗಿದ್ದು ಟಿಪ್ಪರ್ ಲಾರಿಯಲ್ಲಿ ಚಾಲಕ ಮಣ್ಣು ಹೇರಿಕೊಂಡು ಫೈಸಲ್ ನಗರಕ್ಕೆ ತೆರಳುತ್ತಿದ್ದ.

ಘಟನೆ ಆಗುತ್ತಲೇ ಜನ ಸೇರಿದ್ದು, ಲಾರಿ ಚಾಲಕ ಅಬುಬಕ್ಕರ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು