4:40 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಸರಕಾರ ಕೊಡುವ 3 ಸಾವಿರ ಪರಿಹಾರದಿಂದ ಮೀನುಗಾರಿಕೆ ಉಳಿಸಲು ಸಾಧ್ಯವಿಲ್ಲ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ 

14/06/2021, 07:30

ಉಡುಪಿ(reporterkarnataka news): ಮೀನುಗಾರಿಕೆ ಇಂದು ಅಳಿವಿನಂಚಿಗೆ ಸರಿದಿದೆ. ಮೀನುಗಾರರ ಸಮಸ್ಯೆಗಳಿಗೆ ಸರಕಾರ ತುರ್ತು ಸ್ಪಂದಿಸಬೇಕಾಗಿದೆ. ಅದೇ ರೀತಿ ಮೀನುಗಾರಿಕೆ ಉಳಿವಿಗೆ ಏಕ ರೂಪದ ಕಾನೂನು ಜಾರಿಗೆ ತರುವ ಅಗತ್ಯವಿದೆ. ತಾನು ಮೀನುಗಾರಿಕೆ ಸಚಿವನಾಗಿದ್ದಾಗ ಆ ನಿಟ್ಟಿನಲ್ಲಿ ಪ್ರಯತ್ನಿಸಿದ್ದೆ. ಕೇಂದ್ರ ಕೃಷಿ ಸಚಿವರ ಜತೆ ಈ ಕುರಿತು ಚರ್ಚೆ ಕೂಡ ಮಾಡಿದ್ದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಮೀನುಗಾರಿಕೆಗೆ ಬಳಸುವ ಡಿಸೇಲ್ ಬೆಲೆ ಇದೀಗ ಹೆಚ್ಚಳವಾಗಿದೆ. ಕೊರೊನಾದಿಂದ ರಫ್ತಿನ ಮೇಲೂ ಪರಿಣಾಮ ಬೀರಿದೆ. ನಮ್ಮ ಹೆಚ್ಚಿನ ಮೀನು ಉತ್ಪನ್ನಗಳು ಚೀನಾ ದೇಶಕ್ಕೆ ರಫ್ತಾಗುತ್ತದೆ. ಇದೀಗ ಅಲ್ಲಿಯೂ ಕೂಡ ಸಮಸ್ಯೆ ಏರ್ಪಟ್ಟಿದೆ ಇದು ಮೀನುಗಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಸಚಿವರು ಅಭಿಪ್ರಾಯಪಟ್ಟರು.

ರಾಜ್ಯ ಸರಕಾರ ಕೊಡುವ ಕೇವಲ 3 ಸಾವಿರ ರೂ. ಪರಿಹಾರದಿಂದ ಮೀನುಗಾರಿಕೆ ಉಳಿಸಲು ಸಾಧ್ಯವಿಲ್ಲ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಮೀನುಗಾರಿಕೆಗೆ ಪುನಶ್ಚೇತನ ನೀಡಬೇಕು. ಏಕ ರೂಪದ ಕಾನೂನು ತರದೆ ಹೋದರೆ ಮೀನುಗಾರಿಕೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಮೀನುಗಾರಿಕೆ ಇದೇ ರೀತಿ ಮುಂದೆ ಸಾಗಿದರೆ ಮುಂದಿನ 10 ವರ್ಷಗಳಲ್ಲಿ ಮೀನುಗಾರಿಕೆ ಅವನತಿ ಹೊಂದುವ ಸಾಧ್ಯತೆಯ ಕುರಿತು ಭವಿಷ್ಯ ನುಡಿದಿದ್ದೆ. ಆದರೆ ಯಾರೂ ಗಂಭೀರವಾಗಿ ಇದನ್ನು ತೆಗೆದುಕೊಂಡಿರಲಿಲ್ಲ. ಇದೀಗ ದೋಣಿ ಹೊಂದಿರುವವರು, ಅವಲಂಬಿತರು, ಉದ್ದಿಮೆದಾರರು ಭೀತಿಗೊಳಗಾಗಿದ್ದಾರೆ. ಇದೇ ನೀತಿ ಸೂಕ್ತ ನಿರೂಪಣೆಯಿಲ್ಲದೆ ಮೀನುಗಾರಿಕೆ ಮುಂದುವರಿಸಿದರೆ ಅರಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿ ಸಂಪೂರ್ಣ ಬರಿದಾಗುವ ಸಾಧ್ಯತೆ ಇದೆ. ಕೇಂದ್ರ ಹಾಗೂ ಎಲ್ಲ ರಾಜ್ಯಗಳು ಸರಕಾರ ಸೇರಿ ಧೃಢವಾದ ಸಂಕಲ್ಪ ಮಾಡಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮೀನುಗಾರಿಕೆಯ ಭವಿಷ್ಯ ಚಿಂತಾಜನಕವಾಗಲಿದೆಯೆಂದು ಅವರು ನುಡಿದರು.

ರಾಜ್ಯ ಸರಕಾರ ತಕ್ಷಣಕ್ಕೆ ಡಿಸೇಲ್ ಸಬ್ಸಿಡಿ ಬಿಡುಗಡೆ ಮಾಡಬೇಕು. ಮೀನಗಾರರಿಗೆ ಕೇಂದ್ರ ಸರಕಾರದ ಎಕ್ಸೆಸ್ ತೆರಿಗೆಯಾದ 33 ರೂಪಾಯಿಂದ ವಿನಾಯಿತಿ ನೀಡಬೇಕು. ಮೀನುಗಾರರಿಗೆ ಡಿಸೇಲ್ 50 ರೂಪಾಯಿ ಒಳಗೆ ಸಿಗುವಂತಾಗಬೇಕು. ಅದು ಮೀನುಗಾರರಿಗೆ ತಾತ್ಕಾಲಿಕ ಉಪಶಮನ ನೀಡುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು