7:21 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಸರಕಾರ ಕೊಡುವ 3 ಸಾವಿರ ಪರಿಹಾರದಿಂದ ಮೀನುಗಾರಿಕೆ ಉಳಿಸಲು ಸಾಧ್ಯವಿಲ್ಲ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ 

14/06/2021, 07:30

ಉಡುಪಿ(reporterkarnataka news): ಮೀನುಗಾರಿಕೆ ಇಂದು ಅಳಿವಿನಂಚಿಗೆ ಸರಿದಿದೆ. ಮೀನುಗಾರರ ಸಮಸ್ಯೆಗಳಿಗೆ ಸರಕಾರ ತುರ್ತು ಸ್ಪಂದಿಸಬೇಕಾಗಿದೆ. ಅದೇ ರೀತಿ ಮೀನುಗಾರಿಕೆ ಉಳಿವಿಗೆ ಏಕ ರೂಪದ ಕಾನೂನು ಜಾರಿಗೆ ತರುವ ಅಗತ್ಯವಿದೆ. ತಾನು ಮೀನುಗಾರಿಕೆ ಸಚಿವನಾಗಿದ್ದಾಗ ಆ ನಿಟ್ಟಿನಲ್ಲಿ ಪ್ರಯತ್ನಿಸಿದ್ದೆ. ಕೇಂದ್ರ ಕೃಷಿ ಸಚಿವರ ಜತೆ ಈ ಕುರಿತು ಚರ್ಚೆ ಕೂಡ ಮಾಡಿದ್ದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಮೀನುಗಾರಿಕೆಗೆ ಬಳಸುವ ಡಿಸೇಲ್ ಬೆಲೆ ಇದೀಗ ಹೆಚ್ಚಳವಾಗಿದೆ. ಕೊರೊನಾದಿಂದ ರಫ್ತಿನ ಮೇಲೂ ಪರಿಣಾಮ ಬೀರಿದೆ. ನಮ್ಮ ಹೆಚ್ಚಿನ ಮೀನು ಉತ್ಪನ್ನಗಳು ಚೀನಾ ದೇಶಕ್ಕೆ ರಫ್ತಾಗುತ್ತದೆ. ಇದೀಗ ಅಲ್ಲಿಯೂ ಕೂಡ ಸಮಸ್ಯೆ ಏರ್ಪಟ್ಟಿದೆ ಇದು ಮೀನುಗಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಸಚಿವರು ಅಭಿಪ್ರಾಯಪಟ್ಟರು.

ರಾಜ್ಯ ಸರಕಾರ ಕೊಡುವ ಕೇವಲ 3 ಸಾವಿರ ರೂ. ಪರಿಹಾರದಿಂದ ಮೀನುಗಾರಿಕೆ ಉಳಿಸಲು ಸಾಧ್ಯವಿಲ್ಲ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಮೀನುಗಾರಿಕೆಗೆ ಪುನಶ್ಚೇತನ ನೀಡಬೇಕು. ಏಕ ರೂಪದ ಕಾನೂನು ತರದೆ ಹೋದರೆ ಮೀನುಗಾರಿಕೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಮೀನುಗಾರಿಕೆ ಇದೇ ರೀತಿ ಮುಂದೆ ಸಾಗಿದರೆ ಮುಂದಿನ 10 ವರ್ಷಗಳಲ್ಲಿ ಮೀನುಗಾರಿಕೆ ಅವನತಿ ಹೊಂದುವ ಸಾಧ್ಯತೆಯ ಕುರಿತು ಭವಿಷ್ಯ ನುಡಿದಿದ್ದೆ. ಆದರೆ ಯಾರೂ ಗಂಭೀರವಾಗಿ ಇದನ್ನು ತೆಗೆದುಕೊಂಡಿರಲಿಲ್ಲ. ಇದೀಗ ದೋಣಿ ಹೊಂದಿರುವವರು, ಅವಲಂಬಿತರು, ಉದ್ದಿಮೆದಾರರು ಭೀತಿಗೊಳಗಾಗಿದ್ದಾರೆ. ಇದೇ ನೀತಿ ಸೂಕ್ತ ನಿರೂಪಣೆಯಿಲ್ಲದೆ ಮೀನುಗಾರಿಕೆ ಮುಂದುವರಿಸಿದರೆ ಅರಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿ ಸಂಪೂರ್ಣ ಬರಿದಾಗುವ ಸಾಧ್ಯತೆ ಇದೆ. ಕೇಂದ್ರ ಹಾಗೂ ಎಲ್ಲ ರಾಜ್ಯಗಳು ಸರಕಾರ ಸೇರಿ ಧೃಢವಾದ ಸಂಕಲ್ಪ ಮಾಡಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮೀನುಗಾರಿಕೆಯ ಭವಿಷ್ಯ ಚಿಂತಾಜನಕವಾಗಲಿದೆಯೆಂದು ಅವರು ನುಡಿದರು.

ರಾಜ್ಯ ಸರಕಾರ ತಕ್ಷಣಕ್ಕೆ ಡಿಸೇಲ್ ಸಬ್ಸಿಡಿ ಬಿಡುಗಡೆ ಮಾಡಬೇಕು. ಮೀನಗಾರರಿಗೆ ಕೇಂದ್ರ ಸರಕಾರದ ಎಕ್ಸೆಸ್ ತೆರಿಗೆಯಾದ 33 ರೂಪಾಯಿಂದ ವಿನಾಯಿತಿ ನೀಡಬೇಕು. ಮೀನುಗಾರರಿಗೆ ಡಿಸೇಲ್ 50 ರೂಪಾಯಿ ಒಳಗೆ ಸಿಗುವಂತಾಗಬೇಕು. ಅದು ಮೀನುಗಾರರಿಗೆ ತಾತ್ಕಾಲಿಕ ಉಪಶಮನ ನೀಡುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು