12:06 AM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಲೋಡ್ ​ಶೆಡ್ಡಿಂಗ್ ಆಗೊಲ್ಲ: ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ

21/04/2022, 09:33

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಆಗಲ್ಲ, ಕಲ್ಲಿದ್ದಲು ಕೊರತೆ ಇಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕಲ್ಲಿದ್ದಲು ಸರಬರಾಜು ಕೊರತೆ ಇದೆ ಅನ್ನುವ ಊಹಾಪೋಹದ ಮಾತು ಕಾಂಗ್ರೆಸ್ ಹೇಳ್ತಾ ಇದೆ. ಇದರಿಂದ ಲೋಡ್ ಶೆಡ್ಡಿಂಗ್ ಆಗುತ್ತೆ ಅಂತಾ ಸುಳ್ಳು ಸುದ್ದಿ ಹಬ್ಬಿಸ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಆಗಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮಾರ್ಚ್ 21 ರಂದು 14,000 ಮೆಗಾವ್ಯಾಟ್ ಪೀಕ್ ಲೋಡ್ ಕಂಡು ಬಂತು. ಅಷ್ಟು ಬಂದ್ರೂ ಲೋಡ್ ಶೆಡ್ಡಿಂಗ್ ಮಾಡಲಿಲ್ಲ. 10,400 ಮೆಗಾವ್ಯಾಟ್ ಲೋಡ್ ಶೆಡ್ಡಿಂಗ್ ಬಂದಿದೆ. ನಮ್ಮ‌ಬೇಡಿಕೆಯೂ ಕಡಿಮೆಯಾಗ್ತಿದೆ. 12 ಸಾವಿರ ಮೆಗಾವ್ಯಾಟ್ ಗೆ ಇಳಿದಿದೆ. ರಾಯಚೂರು ಮತ್ತು ಬಳ್ಳಾರಿ ಉಷ್ಣ ವಿದ್ಯುತ್​ ಘಟಕಗಳನ್ನು ಬಂದ್ ಮಾಡಿಲ್ಲ. ಅದೆಲ್ಲವೂ ಸುಳ್ಳು ಸುದ್ದಿ ಹರಿದಾಡ್ತಿವೆ. ಎರಡ್ಮೂರು ಯೂನಿಟ್ ಬಂದ್ ಮಾಡಿದ್ದು ಕೊರತೆಯಿಂದಲ್ಲ. ಆರು ತಿಂಗಳ ಮೊದಲೇ ನಾವು ಎಚ್ಚರಿಕೆ ತೆಗೆದುಕೊಂಡಿದ್ವಿ, ಲೋಡ್ ಶೆಡ್ಡಿಂಗ್ ಕೊರತೆ ಇಲ್ಲಿಯವರೆಗೆ ಉದ್ಬವವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಯಚೂರು ಸೇರಿ ಒಂದಿಷ್ಟು ಕಡೆ ಮಳೆಯಿಂದಾಗಿ ಕಲ್ಲಿದ್ದಲು ಕೊರತೆ ಉಂಟಾಗಿದೆ. ಆರು ತಿಂಗಳ ಮೊದಲೇ ಎಚ್ಚರಿಕೆ ತೆಗೆದುಕೊಂಡಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಗದರ್ಶನದಲ್ಲಿ ಎಲ್ಲಾ ವ್ಯವಸ್ಥಿತವಾಗಿ ನೋಡಿಕೊಂಡು ಬಂದಿದ್ದೇವೆ. ಸೋಲಾರ್ ಮತ್ತು ವಿಂಡ್ ಹೆಚ್ಚು ಉತ್ಪಾದನೆ ಆಗ್ತಾ ಇದೆ. ಹಾಗಾಗಿ ಲೋಡ್ ಶೆಡ್ಡಿಂಗ್ ತೊಂದರೆ ಆಗಿಲ್ಲ. ಕಲ್ಲಿದ್ದಲು ಸರಬರಾಜು ಕೊರತೆಯಿಂದ ತೊಂದರೆ ಆಗಿರಬಹುದು. ಮುಂದೆ ಸರಿ ಮಾಡುವ ಕೆಲಸ ಮಾಡಿದ್ದೇವೆ. ಅನಗತ್ಯವಾಗಿ ಕಾಂಗ್ರೆಸ್ ನವರು ಈ ರೀತಿ ಮಾತಾಡುತ್ತಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಇಂತಹದ್ದು ಏನೂ ಆಗಲ್ಲ ಎಂದು ಸಚಿವ ಸುನಿಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು