2:32 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಲೋಡ್ ​ಶೆಡ್ಡಿಂಗ್ ಆಗೊಲ್ಲ: ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ

21/04/2022, 09:33

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಆಗಲ್ಲ, ಕಲ್ಲಿದ್ದಲು ಕೊರತೆ ಇಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕಲ್ಲಿದ್ದಲು ಸರಬರಾಜು ಕೊರತೆ ಇದೆ ಅನ್ನುವ ಊಹಾಪೋಹದ ಮಾತು ಕಾಂಗ್ರೆಸ್ ಹೇಳ್ತಾ ಇದೆ. ಇದರಿಂದ ಲೋಡ್ ಶೆಡ್ಡಿಂಗ್ ಆಗುತ್ತೆ ಅಂತಾ ಸುಳ್ಳು ಸುದ್ದಿ ಹಬ್ಬಿಸ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಆಗಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮಾರ್ಚ್ 21 ರಂದು 14,000 ಮೆಗಾವ್ಯಾಟ್ ಪೀಕ್ ಲೋಡ್ ಕಂಡು ಬಂತು. ಅಷ್ಟು ಬಂದ್ರೂ ಲೋಡ್ ಶೆಡ್ಡಿಂಗ್ ಮಾಡಲಿಲ್ಲ. 10,400 ಮೆಗಾವ್ಯಾಟ್ ಲೋಡ್ ಶೆಡ್ಡಿಂಗ್ ಬಂದಿದೆ. ನಮ್ಮ‌ಬೇಡಿಕೆಯೂ ಕಡಿಮೆಯಾಗ್ತಿದೆ. 12 ಸಾವಿರ ಮೆಗಾವ್ಯಾಟ್ ಗೆ ಇಳಿದಿದೆ. ರಾಯಚೂರು ಮತ್ತು ಬಳ್ಳಾರಿ ಉಷ್ಣ ವಿದ್ಯುತ್​ ಘಟಕಗಳನ್ನು ಬಂದ್ ಮಾಡಿಲ್ಲ. ಅದೆಲ್ಲವೂ ಸುಳ್ಳು ಸುದ್ದಿ ಹರಿದಾಡ್ತಿವೆ. ಎರಡ್ಮೂರು ಯೂನಿಟ್ ಬಂದ್ ಮಾಡಿದ್ದು ಕೊರತೆಯಿಂದಲ್ಲ. ಆರು ತಿಂಗಳ ಮೊದಲೇ ನಾವು ಎಚ್ಚರಿಕೆ ತೆಗೆದುಕೊಂಡಿದ್ವಿ, ಲೋಡ್ ಶೆಡ್ಡಿಂಗ್ ಕೊರತೆ ಇಲ್ಲಿಯವರೆಗೆ ಉದ್ಬವವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಯಚೂರು ಸೇರಿ ಒಂದಿಷ್ಟು ಕಡೆ ಮಳೆಯಿಂದಾಗಿ ಕಲ್ಲಿದ್ದಲು ಕೊರತೆ ಉಂಟಾಗಿದೆ. ಆರು ತಿಂಗಳ ಮೊದಲೇ ಎಚ್ಚರಿಕೆ ತೆಗೆದುಕೊಂಡಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಗದರ್ಶನದಲ್ಲಿ ಎಲ್ಲಾ ವ್ಯವಸ್ಥಿತವಾಗಿ ನೋಡಿಕೊಂಡು ಬಂದಿದ್ದೇವೆ. ಸೋಲಾರ್ ಮತ್ತು ವಿಂಡ್ ಹೆಚ್ಚು ಉತ್ಪಾದನೆ ಆಗ್ತಾ ಇದೆ. ಹಾಗಾಗಿ ಲೋಡ್ ಶೆಡ್ಡಿಂಗ್ ತೊಂದರೆ ಆಗಿಲ್ಲ. ಕಲ್ಲಿದ್ದಲು ಸರಬರಾಜು ಕೊರತೆಯಿಂದ ತೊಂದರೆ ಆಗಿರಬಹುದು. ಮುಂದೆ ಸರಿ ಮಾಡುವ ಕೆಲಸ ಮಾಡಿದ್ದೇವೆ. ಅನಗತ್ಯವಾಗಿ ಕಾಂಗ್ರೆಸ್ ನವರು ಈ ರೀತಿ ಮಾತಾಡುತ್ತಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಇಂತಹದ್ದು ಏನೂ ಆಗಲ್ಲ ಎಂದು ಸಚಿವ ಸುನಿಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು