10:15 AM Wednesday18 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಲೋಡ್ ​ಶೆಡ್ಡಿಂಗ್ ಆಗೊಲ್ಲ: ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ

21/04/2022, 09:33

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಆಗಲ್ಲ, ಕಲ್ಲಿದ್ದಲು ಕೊರತೆ ಇಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕಲ್ಲಿದ್ದಲು ಸರಬರಾಜು ಕೊರತೆ ಇದೆ ಅನ್ನುವ ಊಹಾಪೋಹದ ಮಾತು ಕಾಂಗ್ರೆಸ್ ಹೇಳ್ತಾ ಇದೆ. ಇದರಿಂದ ಲೋಡ್ ಶೆಡ್ಡಿಂಗ್ ಆಗುತ್ತೆ ಅಂತಾ ಸುಳ್ಳು ಸುದ್ದಿ ಹಬ್ಬಿಸ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಆಗಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮಾರ್ಚ್ 21 ರಂದು 14,000 ಮೆಗಾವ್ಯಾಟ್ ಪೀಕ್ ಲೋಡ್ ಕಂಡು ಬಂತು. ಅಷ್ಟು ಬಂದ್ರೂ ಲೋಡ್ ಶೆಡ್ಡಿಂಗ್ ಮಾಡಲಿಲ್ಲ. 10,400 ಮೆಗಾವ್ಯಾಟ್ ಲೋಡ್ ಶೆಡ್ಡಿಂಗ್ ಬಂದಿದೆ. ನಮ್ಮ‌ಬೇಡಿಕೆಯೂ ಕಡಿಮೆಯಾಗ್ತಿದೆ. 12 ಸಾವಿರ ಮೆಗಾವ್ಯಾಟ್ ಗೆ ಇಳಿದಿದೆ. ರಾಯಚೂರು ಮತ್ತು ಬಳ್ಳಾರಿ ಉಷ್ಣ ವಿದ್ಯುತ್​ ಘಟಕಗಳನ್ನು ಬಂದ್ ಮಾಡಿಲ್ಲ. ಅದೆಲ್ಲವೂ ಸುಳ್ಳು ಸುದ್ದಿ ಹರಿದಾಡ್ತಿವೆ. ಎರಡ್ಮೂರು ಯೂನಿಟ್ ಬಂದ್ ಮಾಡಿದ್ದು ಕೊರತೆಯಿಂದಲ್ಲ. ಆರು ತಿಂಗಳ ಮೊದಲೇ ನಾವು ಎಚ್ಚರಿಕೆ ತೆಗೆದುಕೊಂಡಿದ್ವಿ, ಲೋಡ್ ಶೆಡ್ಡಿಂಗ್ ಕೊರತೆ ಇಲ್ಲಿಯವರೆಗೆ ಉದ್ಬವವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಯಚೂರು ಸೇರಿ ಒಂದಿಷ್ಟು ಕಡೆ ಮಳೆಯಿಂದಾಗಿ ಕಲ್ಲಿದ್ದಲು ಕೊರತೆ ಉಂಟಾಗಿದೆ. ಆರು ತಿಂಗಳ ಮೊದಲೇ ಎಚ್ಚರಿಕೆ ತೆಗೆದುಕೊಂಡಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಗದರ್ಶನದಲ್ಲಿ ಎಲ್ಲಾ ವ್ಯವಸ್ಥಿತವಾಗಿ ನೋಡಿಕೊಂಡು ಬಂದಿದ್ದೇವೆ. ಸೋಲಾರ್ ಮತ್ತು ವಿಂಡ್ ಹೆಚ್ಚು ಉತ್ಪಾದನೆ ಆಗ್ತಾ ಇದೆ. ಹಾಗಾಗಿ ಲೋಡ್ ಶೆಡ್ಡಿಂಗ್ ತೊಂದರೆ ಆಗಿಲ್ಲ. ಕಲ್ಲಿದ್ದಲು ಸರಬರಾಜು ಕೊರತೆಯಿಂದ ತೊಂದರೆ ಆಗಿರಬಹುದು. ಮುಂದೆ ಸರಿ ಮಾಡುವ ಕೆಲಸ ಮಾಡಿದ್ದೇವೆ. ಅನಗತ್ಯವಾಗಿ ಕಾಂಗ್ರೆಸ್ ನವರು ಈ ರೀತಿ ಮಾತಾಡುತ್ತಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಇಂತಹದ್ದು ಏನೂ ಆಗಲ್ಲ ಎಂದು ಸಚಿವ ಸುನಿಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು