6:29 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಜಂಗಮಸೋವೇನಹಳ್ಳಿ: ನಿದ್ದೆಗೆಡಿಸಿದ ಹುಚ್ಚು ನಾಯಿ ಹಾವಳಿ; ಮಕ್ಕಳು ಸೇರಿ 7 ಜನರ ಮೇಲೆ ದಾಳಿ

21/04/2022, 19:13

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಜಂಗಮ ಸೋವೆನಹಳ್ಳಿಯಲ್ಲಿ,ಹುಚ್ಚುನಾಯಿ ಆರೇಳು ಜನರನ್ನ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ. 


ಏ. 20ರಂದು ರಾತ್ರಿ ಮನೆಯಂಗಳದಲ್ಲಿ ಮಲಗಿರೋರ ಮೇಲೆ ನಾಯಿ ಎರಗಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ ಎಂದು ತಿಳಿದು ಬಂದಿದೆ. 

ಗ್ರಾಮದಲ್ಲಿ ಹುಚ್ಚು ನಾಯಿ ಕಡಿತಕ್ಕೆ 5 ಮಂದಿ ಮಕ್ಕಳು ಸೇರಿದಂತೆ ಒಟ್ಟು 7 ಜನ ತುತ್ತಾಗಿದ್ದರೆಂದು, ಗ್ರಾಮದ  ಕೆಲವರು ತಿಳಿಸಿದ್ದಾರೆ. ಗ್ರಾಮ ಹಾಗೂ ಗ್ರಾಮದ ಸುತ್ತಮುತ್ತ ಕೆಲ ದಿನಗಳಿಂದ ಹುಚ್ಚು ನಾಯಿ ಗ್ರಾಮದಲ್ಲಿ ಅಲೆದಾಡುತ್ತಿದ್ದು, ಅದು ನಾಯಿಗಳನ್ನ ಹಾಗೂ ದನಕರು ಮತ್ತು ಮನುಷ್ಯರ  ಮೇಲೆ ನಿರಂತರ ದಾಳಿ ಮಾಡುತ್ತಿದೆ ಎಂದು ದೂರಲಾಗಿದೆ. ನಾಯಿಯು ಹುಚ್ಚು ಸೋಂಕುನಿಂದ ಬಳಲುತಿದ್ದು, ಅದು ಕಂಡ ಕಂಡವರ ಮೇಲೆ ಎರಗುತ್ತಿದೆ ಮತ್ತು ದನ ಕರುಗಳ ಮೇಲೇ ನಿರಂತರವಾಗಿ ದಾಳಿ ಮಾಡಿ ಗಾಯಗೊಳಿಸಿದೆ. ಇದು ತೀರಾ ಅಪಾಯಕಾರಿ ಸನ್ನಿವೇಶವಾಗಿದ್ದು, ಮಕ್ಕಳು ಮಹಿಳೆಯರು ಜೀವವನ್ನು ಕೈಯಲ್ಲಿಡಿದೇ ಜೀವಿಸುವಂತಹ ಆತಂಕ ಸೃಷ್ಟಿಯಾಗಿದೆ  ಎಂದು ಗ್ರಾಮದ ಹಿರಿಯರು ಹೇಳಿಕೊಂಡಿದ್ದಾರೆ.ಗ್ರಾಪಂ ಅಧಿಕಾರಿಗಳು ಶೀಘ್ರವೇ ನಾಯಿಯನ್ನು ಸೆರೆಹಿಡಿದು ಸೂಕ್ತ ಕ್ರಮ ಜರುಗಿಸಬೇಕಿದೆ, ಹುಚ್ಚು ನಾಯಿ ದಾಳಿಗೊಳಗಾದವರಿಗೆ ಅಗತ್ಯ ನೆರವನ್ನು, ಗ್ರಾಪಂ ಅಧಿಕಾರಿಗಳು ಶೀಘ್ರವೇ ಒದಗಿಸಬೇಕೆಂದು ಗ್ರಾಮಸ್ಥರು ಈ ಮೂಲಕ ಒತ್ತಾಯಿಸಿದ್ದಾರೆ. ಗ್ರಾಮಕ್ಕೆ ತಾಪಂ ಕಾರ್ಯನಿರ್ವಹಣಾಧಿಕಾರಿ ಭೆಟ್ಟಿ ನೀಡಿ ವಸ್ಥು ಸ್ತಿತಿಯನ್ನು,ಮನವರಿಕೆ ಮಾಡಿಕೊಂಡು,ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು