11:40 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಜಂಗಮಸೋವೇನಹಳ್ಳಿ: ನಿದ್ದೆಗೆಡಿಸಿದ ಹುಚ್ಚು ನಾಯಿ ಹಾವಳಿ; ಮಕ್ಕಳು ಸೇರಿ 7 ಜನರ ಮೇಲೆ ದಾಳಿ

21/04/2022, 19:13

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಜಂಗಮ ಸೋವೆನಹಳ್ಳಿಯಲ್ಲಿ,ಹುಚ್ಚುನಾಯಿ ಆರೇಳು ಜನರನ್ನ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ. 


ಏ. 20ರಂದು ರಾತ್ರಿ ಮನೆಯಂಗಳದಲ್ಲಿ ಮಲಗಿರೋರ ಮೇಲೆ ನಾಯಿ ಎರಗಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ ಎಂದು ತಿಳಿದು ಬಂದಿದೆ. 

ಗ್ರಾಮದಲ್ಲಿ ಹುಚ್ಚು ನಾಯಿ ಕಡಿತಕ್ಕೆ 5 ಮಂದಿ ಮಕ್ಕಳು ಸೇರಿದಂತೆ ಒಟ್ಟು 7 ಜನ ತುತ್ತಾಗಿದ್ದರೆಂದು, ಗ್ರಾಮದ  ಕೆಲವರು ತಿಳಿಸಿದ್ದಾರೆ. ಗ್ರಾಮ ಹಾಗೂ ಗ್ರಾಮದ ಸುತ್ತಮುತ್ತ ಕೆಲ ದಿನಗಳಿಂದ ಹುಚ್ಚು ನಾಯಿ ಗ್ರಾಮದಲ್ಲಿ ಅಲೆದಾಡುತ್ತಿದ್ದು, ಅದು ನಾಯಿಗಳನ್ನ ಹಾಗೂ ದನಕರು ಮತ್ತು ಮನುಷ್ಯರ  ಮೇಲೆ ನಿರಂತರ ದಾಳಿ ಮಾಡುತ್ತಿದೆ ಎಂದು ದೂರಲಾಗಿದೆ. ನಾಯಿಯು ಹುಚ್ಚು ಸೋಂಕುನಿಂದ ಬಳಲುತಿದ್ದು, ಅದು ಕಂಡ ಕಂಡವರ ಮೇಲೆ ಎರಗುತ್ತಿದೆ ಮತ್ತು ದನ ಕರುಗಳ ಮೇಲೇ ನಿರಂತರವಾಗಿ ದಾಳಿ ಮಾಡಿ ಗಾಯಗೊಳಿಸಿದೆ. ಇದು ತೀರಾ ಅಪಾಯಕಾರಿ ಸನ್ನಿವೇಶವಾಗಿದ್ದು, ಮಕ್ಕಳು ಮಹಿಳೆಯರು ಜೀವವನ್ನು ಕೈಯಲ್ಲಿಡಿದೇ ಜೀವಿಸುವಂತಹ ಆತಂಕ ಸೃಷ್ಟಿಯಾಗಿದೆ  ಎಂದು ಗ್ರಾಮದ ಹಿರಿಯರು ಹೇಳಿಕೊಂಡಿದ್ದಾರೆ.ಗ್ರಾಪಂ ಅಧಿಕಾರಿಗಳು ಶೀಘ್ರವೇ ನಾಯಿಯನ್ನು ಸೆರೆಹಿಡಿದು ಸೂಕ್ತ ಕ್ರಮ ಜರುಗಿಸಬೇಕಿದೆ, ಹುಚ್ಚು ನಾಯಿ ದಾಳಿಗೊಳಗಾದವರಿಗೆ ಅಗತ್ಯ ನೆರವನ್ನು, ಗ್ರಾಪಂ ಅಧಿಕಾರಿಗಳು ಶೀಘ್ರವೇ ಒದಗಿಸಬೇಕೆಂದು ಗ್ರಾಮಸ್ಥರು ಈ ಮೂಲಕ ಒತ್ತಾಯಿಸಿದ್ದಾರೆ. ಗ್ರಾಮಕ್ಕೆ ತಾಪಂ ಕಾರ್ಯನಿರ್ವಹಣಾಧಿಕಾರಿ ಭೆಟ್ಟಿ ನೀಡಿ ವಸ್ಥು ಸ್ತಿತಿಯನ್ನು,ಮನವರಿಕೆ ಮಾಡಿಕೊಂಡು,ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು