3:39 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಜಂಗಮಸೋವೇನಹಳ್ಳಿ: ನಿದ್ದೆಗೆಡಿಸಿದ ಹುಚ್ಚು ನಾಯಿ ಹಾವಳಿ; ಮಕ್ಕಳು ಸೇರಿ 7 ಜನರ ಮೇಲೆ ದಾಳಿ

21/04/2022, 19:13

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಜಂಗಮ ಸೋವೆನಹಳ್ಳಿಯಲ್ಲಿ,ಹುಚ್ಚುನಾಯಿ ಆರೇಳು ಜನರನ್ನ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ. 


ಏ. 20ರಂದು ರಾತ್ರಿ ಮನೆಯಂಗಳದಲ್ಲಿ ಮಲಗಿರೋರ ಮೇಲೆ ನಾಯಿ ಎರಗಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ ಎಂದು ತಿಳಿದು ಬಂದಿದೆ. 

ಗ್ರಾಮದಲ್ಲಿ ಹುಚ್ಚು ನಾಯಿ ಕಡಿತಕ್ಕೆ 5 ಮಂದಿ ಮಕ್ಕಳು ಸೇರಿದಂತೆ ಒಟ್ಟು 7 ಜನ ತುತ್ತಾಗಿದ್ದರೆಂದು, ಗ್ರಾಮದ  ಕೆಲವರು ತಿಳಿಸಿದ್ದಾರೆ. ಗ್ರಾಮ ಹಾಗೂ ಗ್ರಾಮದ ಸುತ್ತಮುತ್ತ ಕೆಲ ದಿನಗಳಿಂದ ಹುಚ್ಚು ನಾಯಿ ಗ್ರಾಮದಲ್ಲಿ ಅಲೆದಾಡುತ್ತಿದ್ದು, ಅದು ನಾಯಿಗಳನ್ನ ಹಾಗೂ ದನಕರು ಮತ್ತು ಮನುಷ್ಯರ  ಮೇಲೆ ನಿರಂತರ ದಾಳಿ ಮಾಡುತ್ತಿದೆ ಎಂದು ದೂರಲಾಗಿದೆ. ನಾಯಿಯು ಹುಚ್ಚು ಸೋಂಕುನಿಂದ ಬಳಲುತಿದ್ದು, ಅದು ಕಂಡ ಕಂಡವರ ಮೇಲೆ ಎರಗುತ್ತಿದೆ ಮತ್ತು ದನ ಕರುಗಳ ಮೇಲೇ ನಿರಂತರವಾಗಿ ದಾಳಿ ಮಾಡಿ ಗಾಯಗೊಳಿಸಿದೆ. ಇದು ತೀರಾ ಅಪಾಯಕಾರಿ ಸನ್ನಿವೇಶವಾಗಿದ್ದು, ಮಕ್ಕಳು ಮಹಿಳೆಯರು ಜೀವವನ್ನು ಕೈಯಲ್ಲಿಡಿದೇ ಜೀವಿಸುವಂತಹ ಆತಂಕ ಸೃಷ್ಟಿಯಾಗಿದೆ  ಎಂದು ಗ್ರಾಮದ ಹಿರಿಯರು ಹೇಳಿಕೊಂಡಿದ್ದಾರೆ.ಗ್ರಾಪಂ ಅಧಿಕಾರಿಗಳು ಶೀಘ್ರವೇ ನಾಯಿಯನ್ನು ಸೆರೆಹಿಡಿದು ಸೂಕ್ತ ಕ್ರಮ ಜರುಗಿಸಬೇಕಿದೆ, ಹುಚ್ಚು ನಾಯಿ ದಾಳಿಗೊಳಗಾದವರಿಗೆ ಅಗತ್ಯ ನೆರವನ್ನು, ಗ್ರಾಪಂ ಅಧಿಕಾರಿಗಳು ಶೀಘ್ರವೇ ಒದಗಿಸಬೇಕೆಂದು ಗ್ರಾಮಸ್ಥರು ಈ ಮೂಲಕ ಒತ್ತಾಯಿಸಿದ್ದಾರೆ. ಗ್ರಾಮಕ್ಕೆ ತಾಪಂ ಕಾರ್ಯನಿರ್ವಹಣಾಧಿಕಾರಿ ಭೆಟ್ಟಿ ನೀಡಿ ವಸ್ಥು ಸ್ತಿತಿಯನ್ನು,ಮನವರಿಕೆ ಮಾಡಿಕೊಂಡು,ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು