3:29 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ನಕಲಿ ಪತ್ರಕರ್ತನ ಸೆರೆ: 70 ಸಾವಿರ ರೂ.ಮೌಲ್ಯದ ಸಾಮಗ್ರಿ ವಶ, ನ್ಯಾಯಾಂಗ ಬಂಧನ

14/06/2021, 07:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕಳ್ಳತನ ಮಾಡಿದ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಪಿಎಸ್ ಐ ಪ್ರಕಾಶ್ ರೆಡ್ಡಿ ನೇತೃತ್ವದ ತಂಡ ಮಿಂಚಿನ ದಾಳಿ ನಡೆಸಿ ಬಂಧಿಸಿದೆ. ಆತನಿಂದ 70 ಸಾವಿರ ರೂ. ಬೆಲೆ ಬಾಳುವ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ವೃತ್ತಿಯಲ್ಲಿ ಮೆಕ್ಯಾನಿಕನಾಗಿ ಯುವಕ ಪಟೇಲ್ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಲಿಂಗಸಗೂರ  ಪಟ್ಟಣದಲ್ಲಿ ಮನೆ ಮುಂದೆ ನಿಂತಿದ್ದ ಬೈಕುಗಳ ಪೆಟ್ರೋಲ್, ಸೀಟ್ , ಟಯರ್  ಕಳ್ಳತನ ಮಾಡುತ್ತಿದ್ದ. ಈತನಿಗೆ ಇತರ ಮೂವರು ಸಹಾಯ ಮಾಡುತ್ತಿದ್ದರು. ಕಳವಿನ ಸಾಮಗ್ರಿಗಳನ್ನು ಬೇರೆ ಬೈಕ್ ಗಳಿಗೆ ಜೋಡಿಸಿ ಮಾರಾಟ ಮಾಡುತ್ತಿದ್ದ. ಈತನಿಂದ ಎರಡು ಬೈಕುಗಳ ಸೀಟ್ ಕವರ್, 2 ಫೈಯರ್ ಟ್ಯಾಂಕ್, 5 ಟಯರ್ ಸೇರಿ 70 ಸಾವಿರ ಬೆಲೆಯ ವಸ್ತುಗಳನ್ನು ಜಫ್ತಿ ಮಾಡಲಾಗಿದೆ.  ಈತ ತಾನೊಬ್ಬ ಪತ್ರಕರ್ತ ಎಂದು ಯಾವುದೋ ಬೇನಾಮಿ ಐಡಿ ಇಟ್ಟುಕೊಂಡು ತಿರುಗಾಡುತ್ತಿದ್ದ.

ಡಿವೈಎಸ್ಪಿ ಮಾರ್ಗದರ್ಶನದ ನೇತೃತ್ವದ ಪಿಎಸ್ಐ ಪ್ರಕಾಶ್ ರೆಡ್ಡಿ ಮಿಂಚಿನ ದಾಳಿ ನಡೆಸಿ ನಕಲಿ ಪತ್ರಕರ್ತ ನನ್ನ ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು