11:30 PM Friday11 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ನಕಲಿ ಪತ್ರಕರ್ತನ ಸೆರೆ: 70 ಸಾವಿರ ರೂ.ಮೌಲ್ಯದ ಸಾಮಗ್ರಿ ವಶ, ನ್ಯಾಯಾಂಗ ಬಂಧನ

14/06/2021, 07:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕಳ್ಳತನ ಮಾಡಿದ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಪಿಎಸ್ ಐ ಪ್ರಕಾಶ್ ರೆಡ್ಡಿ ನೇತೃತ್ವದ ತಂಡ ಮಿಂಚಿನ ದಾಳಿ ನಡೆಸಿ ಬಂಧಿಸಿದೆ. ಆತನಿಂದ 70 ಸಾವಿರ ರೂ. ಬೆಲೆ ಬಾಳುವ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ವೃತ್ತಿಯಲ್ಲಿ ಮೆಕ್ಯಾನಿಕನಾಗಿ ಯುವಕ ಪಟೇಲ್ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಲಿಂಗಸಗೂರ  ಪಟ್ಟಣದಲ್ಲಿ ಮನೆ ಮುಂದೆ ನಿಂತಿದ್ದ ಬೈಕುಗಳ ಪೆಟ್ರೋಲ್, ಸೀಟ್ , ಟಯರ್  ಕಳ್ಳತನ ಮಾಡುತ್ತಿದ್ದ. ಈತನಿಗೆ ಇತರ ಮೂವರು ಸಹಾಯ ಮಾಡುತ್ತಿದ್ದರು. ಕಳವಿನ ಸಾಮಗ್ರಿಗಳನ್ನು ಬೇರೆ ಬೈಕ್ ಗಳಿಗೆ ಜೋಡಿಸಿ ಮಾರಾಟ ಮಾಡುತ್ತಿದ್ದ. ಈತನಿಂದ ಎರಡು ಬೈಕುಗಳ ಸೀಟ್ ಕವರ್, 2 ಫೈಯರ್ ಟ್ಯಾಂಕ್, 5 ಟಯರ್ ಸೇರಿ 70 ಸಾವಿರ ಬೆಲೆಯ ವಸ್ತುಗಳನ್ನು ಜಫ್ತಿ ಮಾಡಲಾಗಿದೆ.  ಈತ ತಾನೊಬ್ಬ ಪತ್ರಕರ್ತ ಎಂದು ಯಾವುದೋ ಬೇನಾಮಿ ಐಡಿ ಇಟ್ಟುಕೊಂಡು ತಿರುಗಾಡುತ್ತಿದ್ದ.

ಡಿವೈಎಸ್ಪಿ ಮಾರ್ಗದರ್ಶನದ ನೇತೃತ್ವದ ಪಿಎಸ್ಐ ಪ್ರಕಾಶ್ ರೆಡ್ಡಿ ಮಿಂಚಿನ ದಾಳಿ ನಡೆಸಿ ನಕಲಿ ಪತ್ರಕರ್ತ ನನ್ನ ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು