1:42 AM Saturday22 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಬೆಂಗಳೂರು: ಸೆಮಿಕಾನ್ ಇಂಡಿಯಾ 2022 ಸಮ್ಮೇಳನ; ಏ. 29ರಂದು ಪ್ರಧಾನಿ ಮೋದಿ ಉದ್ಘಾಟನೆ

22/04/2022, 14:49

ಬೆಂಗಳೂರು(reporterkarnataka.com): ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಆಶ್ರಯದಲ್ಲಿ ‘ಸೆಮಿಕಾನ್ ಇಂಡಿಯಾ 2022’ ಮೂರು ದಿನಗಳ ಸಮ್ಮೇಳನ ಬೆಂಗಳೂರಿನ ಐಟಿಸಿ ಗಾರ್ಡೇನಿಯಾದಲ್ಲಿ  ಏ. 29ರಿಂದ ಮೇ 1ರವರೆಗೆ ಆಯೋಜಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಂದು  ಬೆಳಗ್ಗೆ 11 ಗಂಟೆಗೆ ಸಮ್ಮೇಳನ ಉದ್ಘಾಟಿಸಲಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನದಲ್ಲಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಉತ್ಪಾದನೆ, ಸೆಮಿಕಂಡಕ್ಟರ್ ವಿನ್ಯಾಸ, ಉತ್ಪಾದನೆ ಮತ್ತು ಆವಿಷ್ಕಾರದಲ್ಲಿ ಮುಂಚೂಣಿಯಲ್ಲಿರುವಂತೆ ಮಾಡಲು ಯೋಜಿಸಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ಜಾಗತಿಕ ಸೆಮಿಕಂಡಕ್ಟರ್ ಮೌಲ್ಯ ಸರಪಳಿಯಲ್ಲಿ ಭಾರತವನ್ನು ಮಹತ್ವದ ಪಾತ್ರದಾರಿಯನ್ನಾಗಿ ಮಾಡುವುದು ಪ್ರಧಾನಿ ಅವರ ದೃಷ್ಟಿಕೋನವಾಗಿದೆ. ಕಳೆದ 75 ವರ್ಷಗಳಲ್ಲಿ ಮೊದಲ ಬಾರಿಗೆ- ಈ ವಲಯದಲ್ಲಿ ಕ್ಷಿಪ್ರ ನಿರ್ಣಾಯಕ ಪ್ರಗತಿ ಮಾಡಲಾಗಿದೆ. ಸೆಮಿಕಾನ್ ಇಂಡಿಯಾ 2022 ಸಮ್ಮೇಳನವು ಸೆಮಿಕಂಡಕ್ಟರ್ ಉದ್ಯಮ, ಸಂಶೋಧನೆ ಮತ್ತು ಶಿಕ್ಷಣದಿಂದ ಪ್ರಪಂಚದಾದ್ಯಂತದ ಅತ್ಯುತ್ತಮ ಮನಸ್ಸುಗಳನ್ನು ಆಕರ್ಷಿಸುತ್ತದೆ ಮತ್ತು ಭಾರತವನ್ನು ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮತ್ತು ಸೆಮಿಕಂಡಕ್ಟರ್ ಉದ್ಯಮಕ್ಕೆ ಜಾಗತಿಕ ಕೇಂದ್ರವನ್ನಾಗಿ ಮಾಡುವ ಪ್ರಧಾನಮಂತ್ರಿ ಅವರ ದೃಷ್ಟಿಕೋನವನ್ನು ಪೂರೈಸುವಲ್ಲಿ ದೊಡ್ಡ ಹೆಜ್ಜೆಯಾಗಿ ಕಾರ್ಯನಿರ್ವಹಿಸುತ್ತದೆ.

ಈ ಸಮ್ಮೇಳನದಲ್ಲಿ ಮೈಕ್ರಾನ್ ಸಿಇಒ ಸಂಜಯ್ ಮೆಹ್ರೋತ್ರಾ, ಕ್ಯಾಡೆನ್ಸ್ ಸಿಇಒ ಅನಿರುದ್ಧ ದೇವಗನ್, ಇಂಡೋ-ಅಮೆರಿಕ ವೆಂಚರ್ ಪಾಲುದಾರ ಸಂಸ್ಥಾಪಕ ವಿನೋದ್ ಧಾಮ್, ಸೆಮಿ ಅಧ್ಯಕ್ಷ ಅಜಿತ್‌ ಮನೋಚಾ, ಎಮೆರಿಟಸ್ ಸ್ಟಾನ್‌ಫೋರ್ಡ್ ಪ್ರೊ. ಆರೋಗ್ಯಸ್ವಾಮಿ ಪಾಲ್‌ರಾಜ್ ಮತ್ತಿತರರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸೆಮಿಕಂಡಕ್ಟರ್ ವಲಯದಲ್ಲಿ ಪಾಲುದಾರಿಕೆ ಮತ್ತು ಮೈತ್ರಿಗಳನ್ನು ರೂಪಿಸುವ ಮೂರು ದಿನಗಳ ಸಮ್ಮೇಳನದಲ್ಲಿ ಸಹಿ ಮಾಡಲಿರುವ ಒಡಂಬಡಿಕೆಗಳ ಸಂಖ್ಯೆಯನ್ನು ಸಚಿವಾಲಯವು ಎದುರು ನೋಡುತ್ತಿದೆ ಎಂದು ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು