10:16 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ವಕೀಲರ ಜತೆ ವಾಗ್ವಾದ: ದಿಲ್ಲಿ ಕೋರ್ಟ್‌ ಎದುರಲ್ಲೇ ಹಾರಿತು ಗುಂಡು; ತನಿಖೆ ಆರಂಭ

22/04/2022, 14:55

ಹೊಸದಿಲ್ಲಿ(reporterkarnataka.com): ದೇಶದ ರಾಜಧಾನಿಯ ಕೋರ್ಟ್ ಎದುರಿನಲ್ಲೇ ಗುಂಡು ಹಾರಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ದೆಹಲಿಯ ರೋಹಿಣಿ ಕೋರ್ಟ್‌ ಎದುರುನಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ 9.40 ರ ಸುಮಾರಿಗೆ ಘಟನೆ ನಡೆದಿದ್ದು ಗೇಟ್‌ ನಲ್ಲಿ ನಿಯೊಜನೆಗೊಂಡ ಭದ್ರತಾ ಸಿಬ್ಬಂದಿಯ ಆಯುಧದಿಂದ ಗುಂಡು ಹಾರಿದೆ ಎಂದು ವರದಿಗಳು ಹೇಳಿವೆ.

ಗೇಟ್‌ ಎದುರಲ್ಲಿ ಇಬ್ಬರು ವಕೀಲರು ಹಾಗೂ ಇನ್ನೊಬ್ಬ ವ್ಯಕ್ತಿಯ ನಡುವೆ ವಾಗ್ವಾದ ನಡೆದಿದ್ದು ಗೇಟ್‌ ನಲ್ಲಿ ನಿಯೋಜನೆಗೊಂಡಿದ್ದ ನಾಗಾಲ್ಯಾಂಡ್‌ ಸಶಸ್ತ್ರ ಪಡೆಯ ಭದ್ರತಾ ಸಿಬ್ಬಂದಿಯೊಬ್ಬ ಮಧ್ಯಪ್ರವೇಶ ಮಾಡಿದ್ದಾನೆ. ಈ ಸಂದರ್ಭದಲ್ಲಿ ಗುಂಡಿನ ಸದ್ದು ಭೋರ್ಗರೆದಿದೆ.

ಘಟನೆಯನ್ನು ದೆಹಲಿ ಪೋಲೀಸರು ಗಂಭಿರವಾಗಿ ಪರಿಗಣಿಸಿದ್ದು ತನಿಖೆ ಕೈಗೊಂಡಿದ್ದಾರೆ. ಗುಂಡು ಹಾರಲು ಕಾರಣವೇನೆಂಬುದನ್ನು ಪತ್ತೆ ಹಚ್ಚಲಾಗುತ್ತಿದ್ದು ಆಕಸ್ಮಿಕವಾಗಿ ಗುಂಡು ಹಾರಿದೆಯೇ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು