6:24 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರಾಜ್ಯದ 19 ಜಿಲ್ಲೆಗಳು ಇಂದಿನಿಂದ ಅನ್ ಲಾಕ್ : ಗಾರ್ಮೆಂಟ್ಸ್,  ಬೀದಿಬದಿ ವ್ಯಾಪಾರ, ಕಾರ್ಖಾನೆಗಳಿಗೆ ಅವಕಾಶ

14/06/2021, 08:06

ಬೆಂಗಳೂರು(reporterkarnataka news): ರಾಜ್ಯದ 19 ಜಿಲ್ಲೆಗಳು ಇಂದಿನಿಂದ (ಸೋಮವಾರ) ಅನ್​ಲಾಕ್ ಆಗಲಿದ್ದು, ಗಾರ್ಮೆಂಟ್ಸ್, ಬೀದಿ ಬದಿ ವ್ಯಾಪಾರ ಮತ್ತು ಕಾರ್ಖಾನೆಗಳು ತೆರೆಯಲು ಸರಕಾರ ಅವಕಾಶ ಕಲ್ಪಿಸಲಿದೆ.

ಮಧ್ಯಾಹ್ನದವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ವ್ಯಾಪಾರ ಸ್ಥಳದಲ್ಲಿ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಕಡ್ಡಾಯದೊಂದಿಗೆ ಅವಕಾಶ ನೀಡಲಾಗಿದೆ.

ಅನ್ ಲಾಕ್ ಆದ ಜಿಲ್ಲೆಗಳ ನಗರದ ಪ್ರದೇಶದಲ್ಲಿ ವಾಹನಗಳ ಓಡಾಟ ಹೆಚ್ಚಾಗಲಿದೆ. ಕೊರೊನಾ ಆತಂಕ ಎದುರಿಸುತ್ತಿರುವ ಈ ಹೊತ್ತಿನಲ್ಲಿ ಇದೊಂದು ದೊಡ್ಡ ಸವಾಲಾಗಲಿದೆ.

ಸಾರ್ವಜನಿಕ ಸಾರಿಗೆ ಲಭ್ಯವಿರುವುದಿಲ್ಲ. ಖಾಸಗಿ ವಾಹನಗಳ ಬಳಕೆಗೆ ಅವಕಾಶವಿದೆ.

ಸ್ವಂತ ವಾಹನಗಳು, ಕ್ಯಾಬ್, ಆಟೋಗಳ ಸಂಚಾರ ನಡೆಸಲಿದೆ. ಆದರೆ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ರಾತ್ರಿ ವೇಳೆ ಅನಗತ್ಯ ಓಡಾಡುವ ವಾಹನಗಳ ತಪಾಸಣೆಯ ಜವಾಬ್ದಾರಿಯೂ ಪೊಲೀಸರ ಮೇಲಿದೆ

ವೀಕೆಂಡ್ ಕರ್ಪ್ಯೂ ಕೂಡ ಇರುತ್ತದೆ. ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗಿನ ಜಾವದವರೆಗೆ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು