9:33 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ರಾಜ್ಯದ 19 ಜಿಲ್ಲೆಗಳು ಇಂದಿನಿಂದ ಅನ್ ಲಾಕ್ : ಗಾರ್ಮೆಂಟ್ಸ್,  ಬೀದಿಬದಿ ವ್ಯಾಪಾರ, ಕಾರ್ಖಾನೆಗಳಿಗೆ ಅವಕಾಶ

14/06/2021, 08:06

ಬೆಂಗಳೂರು(reporterkarnataka news): ರಾಜ್ಯದ 19 ಜಿಲ್ಲೆಗಳು ಇಂದಿನಿಂದ (ಸೋಮವಾರ) ಅನ್​ಲಾಕ್ ಆಗಲಿದ್ದು, ಗಾರ್ಮೆಂಟ್ಸ್, ಬೀದಿ ಬದಿ ವ್ಯಾಪಾರ ಮತ್ತು ಕಾರ್ಖಾನೆಗಳು ತೆರೆಯಲು ಸರಕಾರ ಅವಕಾಶ ಕಲ್ಪಿಸಲಿದೆ.

ಮಧ್ಯಾಹ್ನದವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ವ್ಯಾಪಾರ ಸ್ಥಳದಲ್ಲಿ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಕಡ್ಡಾಯದೊಂದಿಗೆ ಅವಕಾಶ ನೀಡಲಾಗಿದೆ.

ಅನ್ ಲಾಕ್ ಆದ ಜಿಲ್ಲೆಗಳ ನಗರದ ಪ್ರದೇಶದಲ್ಲಿ ವಾಹನಗಳ ಓಡಾಟ ಹೆಚ್ಚಾಗಲಿದೆ. ಕೊರೊನಾ ಆತಂಕ ಎದುರಿಸುತ್ತಿರುವ ಈ ಹೊತ್ತಿನಲ್ಲಿ ಇದೊಂದು ದೊಡ್ಡ ಸವಾಲಾಗಲಿದೆ.

ಸಾರ್ವಜನಿಕ ಸಾರಿಗೆ ಲಭ್ಯವಿರುವುದಿಲ್ಲ. ಖಾಸಗಿ ವಾಹನಗಳ ಬಳಕೆಗೆ ಅವಕಾಶವಿದೆ.

ಸ್ವಂತ ವಾಹನಗಳು, ಕ್ಯಾಬ್, ಆಟೋಗಳ ಸಂಚಾರ ನಡೆಸಲಿದೆ. ಆದರೆ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ರಾತ್ರಿ ವೇಳೆ ಅನಗತ್ಯ ಓಡಾಡುವ ವಾಹನಗಳ ತಪಾಸಣೆಯ ಜವಾಬ್ದಾರಿಯೂ ಪೊಲೀಸರ ಮೇಲಿದೆ

ವೀಕೆಂಡ್ ಕರ್ಪ್ಯೂ ಕೂಡ ಇರುತ್ತದೆ. ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗಿನ ಜಾವದವರೆಗೆ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು