12:07 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ರಾಜ್ಯದ 19 ಜಿಲ್ಲೆಗಳು ಇಂದಿನಿಂದ ಅನ್ ಲಾಕ್ : ಗಾರ್ಮೆಂಟ್ಸ್,  ಬೀದಿಬದಿ ವ್ಯಾಪಾರ, ಕಾರ್ಖಾನೆಗಳಿಗೆ ಅವಕಾಶ

14/06/2021, 08:06

ಬೆಂಗಳೂರು(reporterkarnataka news): ರಾಜ್ಯದ 19 ಜಿಲ್ಲೆಗಳು ಇಂದಿನಿಂದ (ಸೋಮವಾರ) ಅನ್​ಲಾಕ್ ಆಗಲಿದ್ದು, ಗಾರ್ಮೆಂಟ್ಸ್, ಬೀದಿ ಬದಿ ವ್ಯಾಪಾರ ಮತ್ತು ಕಾರ್ಖಾನೆಗಳು ತೆರೆಯಲು ಸರಕಾರ ಅವಕಾಶ ಕಲ್ಪಿಸಲಿದೆ.

ಮಧ್ಯಾಹ್ನದವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ವ್ಯಾಪಾರ ಸ್ಥಳದಲ್ಲಿ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಕಡ್ಡಾಯದೊಂದಿಗೆ ಅವಕಾಶ ನೀಡಲಾಗಿದೆ.

ಅನ್ ಲಾಕ್ ಆದ ಜಿಲ್ಲೆಗಳ ನಗರದ ಪ್ರದೇಶದಲ್ಲಿ ವಾಹನಗಳ ಓಡಾಟ ಹೆಚ್ಚಾಗಲಿದೆ. ಕೊರೊನಾ ಆತಂಕ ಎದುರಿಸುತ್ತಿರುವ ಈ ಹೊತ್ತಿನಲ್ಲಿ ಇದೊಂದು ದೊಡ್ಡ ಸವಾಲಾಗಲಿದೆ.

ಸಾರ್ವಜನಿಕ ಸಾರಿಗೆ ಲಭ್ಯವಿರುವುದಿಲ್ಲ. ಖಾಸಗಿ ವಾಹನಗಳ ಬಳಕೆಗೆ ಅವಕಾಶವಿದೆ.

ಸ್ವಂತ ವಾಹನಗಳು, ಕ್ಯಾಬ್, ಆಟೋಗಳ ಸಂಚಾರ ನಡೆಸಲಿದೆ. ಆದರೆ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ರಾತ್ರಿ ವೇಳೆ ಅನಗತ್ಯ ಓಡಾಡುವ ವಾಹನಗಳ ತಪಾಸಣೆಯ ಜವಾಬ್ದಾರಿಯೂ ಪೊಲೀಸರ ಮೇಲಿದೆ

ವೀಕೆಂಡ್ ಕರ್ಪ್ಯೂ ಕೂಡ ಇರುತ್ತದೆ. ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗಿನ ಜಾವದವರೆಗೆ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು