10:00 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ರಾಜ್ಯದ 19 ಜಿಲ್ಲೆಗಳು ಇಂದಿನಿಂದ ಅನ್ ಲಾಕ್ : ಗಾರ್ಮೆಂಟ್ಸ್,  ಬೀದಿಬದಿ ವ್ಯಾಪಾರ, ಕಾರ್ಖಾನೆಗಳಿಗೆ ಅವಕಾಶ

14/06/2021, 08:06

ಬೆಂಗಳೂರು(reporterkarnataka news): ರಾಜ್ಯದ 19 ಜಿಲ್ಲೆಗಳು ಇಂದಿನಿಂದ (ಸೋಮವಾರ) ಅನ್​ಲಾಕ್ ಆಗಲಿದ್ದು, ಗಾರ್ಮೆಂಟ್ಸ್, ಬೀದಿ ಬದಿ ವ್ಯಾಪಾರ ಮತ್ತು ಕಾರ್ಖಾನೆಗಳು ತೆರೆಯಲು ಸರಕಾರ ಅವಕಾಶ ಕಲ್ಪಿಸಲಿದೆ.

ಮಧ್ಯಾಹ್ನದವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ವ್ಯಾಪಾರ ಸ್ಥಳದಲ್ಲಿ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಕಡ್ಡಾಯದೊಂದಿಗೆ ಅವಕಾಶ ನೀಡಲಾಗಿದೆ.

ಅನ್ ಲಾಕ್ ಆದ ಜಿಲ್ಲೆಗಳ ನಗರದ ಪ್ರದೇಶದಲ್ಲಿ ವಾಹನಗಳ ಓಡಾಟ ಹೆಚ್ಚಾಗಲಿದೆ. ಕೊರೊನಾ ಆತಂಕ ಎದುರಿಸುತ್ತಿರುವ ಈ ಹೊತ್ತಿನಲ್ಲಿ ಇದೊಂದು ದೊಡ್ಡ ಸವಾಲಾಗಲಿದೆ.

ಸಾರ್ವಜನಿಕ ಸಾರಿಗೆ ಲಭ್ಯವಿರುವುದಿಲ್ಲ. ಖಾಸಗಿ ವಾಹನಗಳ ಬಳಕೆಗೆ ಅವಕಾಶವಿದೆ.

ಸ್ವಂತ ವಾಹನಗಳು, ಕ್ಯಾಬ್, ಆಟೋಗಳ ಸಂಚಾರ ನಡೆಸಲಿದೆ. ಆದರೆ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ರಾತ್ರಿ ವೇಳೆ ಅನಗತ್ಯ ಓಡಾಡುವ ವಾಹನಗಳ ತಪಾಸಣೆಯ ಜವಾಬ್ದಾರಿಯೂ ಪೊಲೀಸರ ಮೇಲಿದೆ

ವೀಕೆಂಡ್ ಕರ್ಪ್ಯೂ ಕೂಡ ಇರುತ್ತದೆ. ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗಿನ ಜಾವದವರೆಗೆ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು