1:39 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಹೊನ್ನಾವರದ ಗೇರುಸೊಪ್ಪಾ: ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ 

23/04/2022, 11:04

ಕಾರವಾರ(reporterkarnataka.con):

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪಾದ ಕೃಷ್ಣ ಕೆರೆಯಲ್ಲಿರುವ ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ ಪ್ರಾರಂಭಗೊಂಡಿತು. 

ಪ್ರಥಮ ದಿನವಾದ ಏಪ್ರಿಲ್ 21 ರಂದು ಇಂಗ್ಲಿಷ್ ಲರ್ನಿಂಗ್ ವಿತ್ ಫನ್, ಚಿತ್ರಕಲೆ, ಇಂಗ್ಲಿಷ್ ಗ್ರಾಮರ್, ಹಾಡು ಇನ್ನು ಮುಂತಾದ ಅನೇಕ ಚಟುವಿಕೆಗಳೊಂದಿಗೆ ಮಕ್ಕಳು ನಲಿಯುತ್ತ ಕಲಿಯುತ್ತಾ ಸಂಭ್ರಮಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ವಿ. ಟಿ. ನಾಯ್ಕ್ ರವರು ಮಕ್ಕಳೊಂದಿಗೆ ಸಂಭ್ರಮಿಸುತ್ತಾ ತಣ್ಣನೆಯ ಐಸ್ ಕ್ರೀಂ ಮತ್ತು ಬಿಸ್ಕೆಟ್ ಗಳನ್ನು ಹಂಚಿದರು. ಮುಖ್ಯಾಧ್ಯಾಪಕಿ ಭಾರತಿ ಕುಲಕರ್ಣಿ ಮಕ್ಕಳಿಗೆ ಮಾರ್ಗದರ್ಶನ ಮಾಡುವುದರ ಜೊತೆಗೆ ಮಾತನಾಡಿ ಬೇಸಿಗೆ ರಜಾ ಶಿಬಿರ ಉಚಿತವಾಗಿ ಏಪ್ರಿಲ್ 21 ರಿಂದ ಮೇ 1ರ ವರೆಗೆ ನಡೆಯುತ್ತಿರುವುದರಿಂದ ಇದರ ಪ್ರಯೋಜನವನ್ನು ಇನ್ನೂ ಹೆಚ್ಚಿನ ಬಡ ವಿದ್ಯಾರ್ಥಿಗಳು ಪಡೆದುಕೊಳ್ಳುವಂತಾಗಬೇಕು ಎಂದರು.

ಶಿಕ್ಷಕರಾದ ಮೇಟಿಲ್ದಾ ಮಿರಾಂದ, ಅನಿತಾ ನಾಯ್ಕ್,  ಸುಜಾತಾ ನಾಯ್ಕ್ ಶಿಬಿರದ ಮಾರ್ಗದರ್ಶಕರಾಗಿದ್ದರು. ಪಾಲಕರು ಮಕ್ಕಳ ಕಲಿಕೆಯ ಆಸಕ್ತಿಯನ್ನು ಕಂಡು ಸಂತಸಪಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು