3:32 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಹೊನ್ನಾವರದ ಗೇರುಸೊಪ್ಪಾ: ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ 

23/04/2022, 11:04

ಕಾರವಾರ(reporterkarnataka.con):

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪಾದ ಕೃಷ್ಣ ಕೆರೆಯಲ್ಲಿರುವ ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ ಪ್ರಾರಂಭಗೊಂಡಿತು. 

ಪ್ರಥಮ ದಿನವಾದ ಏಪ್ರಿಲ್ 21 ರಂದು ಇಂಗ್ಲಿಷ್ ಲರ್ನಿಂಗ್ ವಿತ್ ಫನ್, ಚಿತ್ರಕಲೆ, ಇಂಗ್ಲಿಷ್ ಗ್ರಾಮರ್, ಹಾಡು ಇನ್ನು ಮುಂತಾದ ಅನೇಕ ಚಟುವಿಕೆಗಳೊಂದಿಗೆ ಮಕ್ಕಳು ನಲಿಯುತ್ತ ಕಲಿಯುತ್ತಾ ಸಂಭ್ರಮಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ವಿ. ಟಿ. ನಾಯ್ಕ್ ರವರು ಮಕ್ಕಳೊಂದಿಗೆ ಸಂಭ್ರಮಿಸುತ್ತಾ ತಣ್ಣನೆಯ ಐಸ್ ಕ್ರೀಂ ಮತ್ತು ಬಿಸ್ಕೆಟ್ ಗಳನ್ನು ಹಂಚಿದರು. ಮುಖ್ಯಾಧ್ಯಾಪಕಿ ಭಾರತಿ ಕುಲಕರ್ಣಿ ಮಕ್ಕಳಿಗೆ ಮಾರ್ಗದರ್ಶನ ಮಾಡುವುದರ ಜೊತೆಗೆ ಮಾತನಾಡಿ ಬೇಸಿಗೆ ರಜಾ ಶಿಬಿರ ಉಚಿತವಾಗಿ ಏಪ್ರಿಲ್ 21 ರಿಂದ ಮೇ 1ರ ವರೆಗೆ ನಡೆಯುತ್ತಿರುವುದರಿಂದ ಇದರ ಪ್ರಯೋಜನವನ್ನು ಇನ್ನೂ ಹೆಚ್ಚಿನ ಬಡ ವಿದ್ಯಾರ್ಥಿಗಳು ಪಡೆದುಕೊಳ್ಳುವಂತಾಗಬೇಕು ಎಂದರು.

ಶಿಕ್ಷಕರಾದ ಮೇಟಿಲ್ದಾ ಮಿರಾಂದ, ಅನಿತಾ ನಾಯ್ಕ್,  ಸುಜಾತಾ ನಾಯ್ಕ್ ಶಿಬಿರದ ಮಾರ್ಗದರ್ಶಕರಾಗಿದ್ದರು. ಪಾಲಕರು ಮಕ್ಕಳ ಕಲಿಕೆಯ ಆಸಕ್ತಿಯನ್ನು ಕಂಡು ಸಂತಸಪಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು