1:16 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಹೊನ್ನಾವರದ ಗೇರುಸೊಪ್ಪಾ: ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ 

23/04/2022, 11:04

ಕಾರವಾರ(reporterkarnataka.con):

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪಾದ ಕೃಷ್ಣ ಕೆರೆಯಲ್ಲಿರುವ ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ ಪ್ರಾರಂಭಗೊಂಡಿತು. 

ಪ್ರಥಮ ದಿನವಾದ ಏಪ್ರಿಲ್ 21 ರಂದು ಇಂಗ್ಲಿಷ್ ಲರ್ನಿಂಗ್ ವಿತ್ ಫನ್, ಚಿತ್ರಕಲೆ, ಇಂಗ್ಲಿಷ್ ಗ್ರಾಮರ್, ಹಾಡು ಇನ್ನು ಮುಂತಾದ ಅನೇಕ ಚಟುವಿಕೆಗಳೊಂದಿಗೆ ಮಕ್ಕಳು ನಲಿಯುತ್ತ ಕಲಿಯುತ್ತಾ ಸಂಭ್ರಮಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ವಿ. ಟಿ. ನಾಯ್ಕ್ ರವರು ಮಕ್ಕಳೊಂದಿಗೆ ಸಂಭ್ರಮಿಸುತ್ತಾ ತಣ್ಣನೆಯ ಐಸ್ ಕ್ರೀಂ ಮತ್ತು ಬಿಸ್ಕೆಟ್ ಗಳನ್ನು ಹಂಚಿದರು. ಮುಖ್ಯಾಧ್ಯಾಪಕಿ ಭಾರತಿ ಕುಲಕರ್ಣಿ ಮಕ್ಕಳಿಗೆ ಮಾರ್ಗದರ್ಶನ ಮಾಡುವುದರ ಜೊತೆಗೆ ಮಾತನಾಡಿ ಬೇಸಿಗೆ ರಜಾ ಶಿಬಿರ ಉಚಿತವಾಗಿ ಏಪ್ರಿಲ್ 21 ರಿಂದ ಮೇ 1ರ ವರೆಗೆ ನಡೆಯುತ್ತಿರುವುದರಿಂದ ಇದರ ಪ್ರಯೋಜನವನ್ನು ಇನ್ನೂ ಹೆಚ್ಚಿನ ಬಡ ವಿದ್ಯಾರ್ಥಿಗಳು ಪಡೆದುಕೊಳ್ಳುವಂತಾಗಬೇಕು ಎಂದರು.

ಶಿಕ್ಷಕರಾದ ಮೇಟಿಲ್ದಾ ಮಿರಾಂದ, ಅನಿತಾ ನಾಯ್ಕ್,  ಸುಜಾತಾ ನಾಯ್ಕ್ ಶಿಬಿರದ ಮಾರ್ಗದರ್ಶಕರಾಗಿದ್ದರು. ಪಾಲಕರು ಮಕ್ಕಳ ಕಲಿಕೆಯ ಆಸಕ್ತಿಯನ್ನು ಕಂಡು ಸಂತಸಪಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು