12:34 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಹೊನ್ನಾವರದ ಗೇರುಸೊಪ್ಪಾ: ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ 

23/04/2022, 11:04

ಕಾರವಾರ(reporterkarnataka.con):

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪಾದ ಕೃಷ್ಣ ಕೆರೆಯಲ್ಲಿರುವ ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ ಪ್ರಾರಂಭಗೊಂಡಿತು. 

ಪ್ರಥಮ ದಿನವಾದ ಏಪ್ರಿಲ್ 21 ರಂದು ಇಂಗ್ಲಿಷ್ ಲರ್ನಿಂಗ್ ವಿತ್ ಫನ್, ಚಿತ್ರಕಲೆ, ಇಂಗ್ಲಿಷ್ ಗ್ರಾಮರ್, ಹಾಡು ಇನ್ನು ಮುಂತಾದ ಅನೇಕ ಚಟುವಿಕೆಗಳೊಂದಿಗೆ ಮಕ್ಕಳು ನಲಿಯುತ್ತ ಕಲಿಯುತ್ತಾ ಸಂಭ್ರಮಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ವಿ. ಟಿ. ನಾಯ್ಕ್ ರವರು ಮಕ್ಕಳೊಂದಿಗೆ ಸಂಭ್ರಮಿಸುತ್ತಾ ತಣ್ಣನೆಯ ಐಸ್ ಕ್ರೀಂ ಮತ್ತು ಬಿಸ್ಕೆಟ್ ಗಳನ್ನು ಹಂಚಿದರು. ಮುಖ್ಯಾಧ್ಯಾಪಕಿ ಭಾರತಿ ಕುಲಕರ್ಣಿ ಮಕ್ಕಳಿಗೆ ಮಾರ್ಗದರ್ಶನ ಮಾಡುವುದರ ಜೊತೆಗೆ ಮಾತನಾಡಿ ಬೇಸಿಗೆ ರಜಾ ಶಿಬಿರ ಉಚಿತವಾಗಿ ಏಪ್ರಿಲ್ 21 ರಿಂದ ಮೇ 1ರ ವರೆಗೆ ನಡೆಯುತ್ತಿರುವುದರಿಂದ ಇದರ ಪ್ರಯೋಜನವನ್ನು ಇನ್ನೂ ಹೆಚ್ಚಿನ ಬಡ ವಿದ್ಯಾರ್ಥಿಗಳು ಪಡೆದುಕೊಳ್ಳುವಂತಾಗಬೇಕು ಎಂದರು.

ಶಿಕ್ಷಕರಾದ ಮೇಟಿಲ್ದಾ ಮಿರಾಂದ, ಅನಿತಾ ನಾಯ್ಕ್,  ಸುಜಾತಾ ನಾಯ್ಕ್ ಶಿಬಿರದ ಮಾರ್ಗದರ್ಶಕರಾಗಿದ್ದರು. ಪಾಲಕರು ಮಕ್ಕಳ ಕಲಿಕೆಯ ಆಸಕ್ತಿಯನ್ನು ಕಂಡು ಸಂತಸಪಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು