10:23 PM Saturday20 - September 2025
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು: ಡಿವೈಡರ್ ಹಾರಿದ ಕಾರು ಪ್ರಕರಣ; ಗಾಯಾಳು ಮಹಿಳೆ ಸಾವು; ಅಂಗಾಂಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ

23/04/2022, 13:53

ಮಂಗಳೂರು(reporterkarnataka.com) : ನಗರದ ಬಲ್ಲಾಳ್ ಬಾಗ್ ಬಳಿ ಎರಡು ವಾರಗಳ ಹಿಂದೆ ಬಿಎಂಡಬ್ಲ್ಯು ಕಾರು ಡಿವೈಡರ್ ಹಾರಿದ ಪರಿಣಾಮ ಉಂಟಾದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರೀತಿ ಮನೋಜ್ (47) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕರಂಗಲ್ಪಾಡಿ ನಿವಾಸಿ ಪ್ರೀತಿ ಮನೋಜ್ ಅವರು ಎ. 9ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಬಿಎಂಡಬ್ಲ್ಯು ಕಾರು ಡಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇಂಟೀರಿಯರ್ ಡೆಕೊರೇಟರ್ ಶ್ರವಣ್ ಕುಮಾರ್ ಎಂಬಾತ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ದಾಟಿ ಸ್ಕೂಟರ್ ಮತ್ತು ಕಾರಿಗೆ ಡಿಕ್ಕಿ ಹೊಡೆದಿತ್ತು.

ಈ ನಡುವೆ ಮೆದುಳು ನಿಷ್ಕೃಯಗೊಂಡ ಪ್ರೀತಿ ಅವ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು