2:42 AM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಬಿರುಸುಗೊಂಡ ಮುಂಗಾರು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ; ಬೋಳೂರು ಸ್ಮಶಾನ ಆವರಣ ಗೋಡೆ ಕುಸಿತ

14/06/2021, 12:51

ಮಂಗಳೂರು(reporterkarnataka news) ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಅರಬ್ಬಿ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾದ ಎರಡು ಚಂಡ ಮಾರುತ ಪರಿಣಾಮ ಆರಂಭದಲ್ಲೇ ಮುಂಗಾರು ದುರ್ಬಲಗೊಂಡಿತ್ತು. ಆದರೆ ಜೂನ್ ಮಧ್ಯಭಾಗ ಪ್ರವೇಶಿಸುತ್ತಿದ್ದಂತೆ ಮುಂಗಾರು ಮತ್ತಷ್ಟು ಬಿರುಸುಗೊಂಡಿದೆ.

ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದೆ. ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಯಲ್ಲೋ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ.

ಭಾರಿ ಮಳೆಯಿಂದ ಮಂಗಳೂರಿನಲ್ಲಿ ಬಹುತೇಕ ತಗ್ಗು ಪ್ರವೇಶಗಳು ಜಲಾವೃತವಾಗಿವೆ. ನಗರದಲ್ಲಿ ಹಲವೆಡೆ ರಸ್ತೆಯಲ್ಲಿ ನೀರು ನಿಂತು ಜನ ಹಾಗೂ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ನಗರದ ಕದ್ರಿಕಂಬಳ, ಮಾಲೆಮಾರ್, ಕೊಟ್ಟಾರ ಚೌಕಿ, ಕುದ್ರೋಳಿ, ಅತ್ತಾವರ ಮುಂತಾದ ಕಡೆಗಳಲ್ಲಿ ರಸ್ತೆ ಮೇಲೆ ನೀರು ನಿಂತಿದೆ. ಬೋಳಾರು ಸ್ಮಶಾನದ ಆವರಣ ಗೋಡೆ ಭಾರಿ ಮಳೆಗೆ ಇಂದು ಮುಂಜಾನೆ ರಸ್ತೆಗೆ ಕುಸಿದು ಬಿದ್ದಿದೆ. ಸ್ಥಳೀಯ ಕಾರ್ಪೊರೇಟರ್ ಜಗದೀಶ ಶೆಟ್ಟಿ ಅವರು ತಕ್ಷಣ ಸ್ಥಳಕ್ಕೆ ಆಗಮಿಸಿ ತೆರವುಗೊಳಿಸಿದ್ದಾರೆ. ನಗರದ ಹೊರವಲಯದ ಅಡ್ಯಾರ್, ಅರ್ಕುಳದ ತಗ್ಗು ಪ್ರದೇಶ ಜಲಾವೃತವಾಗಿದೆ.

ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು