9:55 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬೆಂಗಳೂರಲ್ಲಿ BA.10, BA.2,12 ಕೊರೊನಾ ಹೊಸ ರೂಪಾಂತರಿ ವೈರಸ್‌ ಪತ್ತೆ; ಮತ್ತೆ ಮಾಸ್ಕ್ ಗೆ ಮೊರೆ

23/04/2022, 21:55

ಬೆಂಗಳೂರು(reporterkarnataka.com):

ರಾಜ್ಯದಲ್ಲಿ ಮತ್ತೆ ಕೊರೊನಾ ಹಾವಳಿ ತಲೆ ಎತ್ತುವ ಮುನ್ಸೂಚನೆಗಳಿವೆ. ಬೆಂಗಳೂರಿನಲ್ಲಿ ಕೊರೊನಾ ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ. 

ರಾಜಧಾನಿಯಲ್ಲಿ ಬಿಎ.10, ಬಿಎ.2, 12 ಹೊಸ ವೈರಸ್‌ ಪತ್ತೆಯಾಗಿದೆ ಎಂದು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ.ಸಿ.ಎನ್‌. ಮಂಜುನಾಥ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬಿಎ.10, ಬಿಎ.2, 12 ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ. ಇನ್ನೀದು ದೆಹಲಿ, ಮುಂಬೈನಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಭಾರತದಲ್ಲಿ ಈಗಾಗಲೇ ಕೊರೊನಾ 4ನೇ ಅಲೆ ಆರಂಭವಾಗಿದೆ. ಇನ್ನು ಕರ್ನಾಟಕದಲ್ಲಿ 3-4 ವಾರಗಳಲ್ಲಿ 4ನೇ ಅಲೆ ಬರುವ ಸಾಧ್ಯತೆಯಿದೆ’ ಎಂದರು.

 ‘ಕೊರೊನಾ 4ನೇ ಅಲೆ 3ನೇ ಅಲೆಯ ಗುಣಲಕ್ಷಣಗಳನ್ನ ಹೊಂದಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇರುತ್ತದೆ. ರಾಜ್ಯದಲ್ಲಿ ಈಗಾಗಲೇ ಎಲ್ಲ ಚಟುವಟಿಕೆಗಳು ಆರಂಭವಾಗಿದೆ. ಇನ್ನೆರೆಡು ವಾರದಲ್ಲಿ ಕೊರೊನಾ ಕೇಸ್‌ ಸಂಖ್ಯೆಯೂ ಹೆಚ್ಚಾಗಲಿದೆ. ಶ್ವಾಸಕೋಶ, ಹೃದ್ರೋಗ, ಕ್ಯಾನ್ಸರ್‌ನಿಂದ ಬಳಲುವವರು ಹುಷಾರಾಗಿರಿ. ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಇನ್ನು ಜ್ವರ, ಕೆಮ್ಮು ಇದ್ದರೆ ಕಡ್ಡಾಯವಾಗಿ ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ. ಕೊರೊನಾ ಲಸಿಕೆ ಪಡೆದಿದ್ದೇವೆಂದು ನಿರ್ಲಕ್ಷ್ಯ ಮಾಡುವುದು ಬೇಡ’ ಎಂದರು.

ಇನ್ನು ‘ಆಸ್ಪತ್ರೆಗೆ ದಾಖಲಾಗುವವರಿಗೆ ಕೊವಿಡ್‌ ಟೆಸ್ಟ್‌ ಮಾಡಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್‌ ಟೆಸ್ಟಿಂಗ್‌ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ. ಇದರಿಂದ ರೂಪಾಂತರಿ ವೈರಸ್‌ ಹರಡುವುದನ್ನು ತಡೆಯಬಹುದು’ ಎಂದು ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು