12:34 AM Monday25 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಬೆಂಗಳೂರಲ್ಲಿ BA.10, BA.2,12 ಕೊರೊನಾ ಹೊಸ ರೂಪಾಂತರಿ ವೈರಸ್‌ ಪತ್ತೆ; ಮತ್ತೆ ಮಾಸ್ಕ್ ಗೆ ಮೊರೆ

23/04/2022, 21:55

ಬೆಂಗಳೂರು(reporterkarnataka.com):

ರಾಜ್ಯದಲ್ಲಿ ಮತ್ತೆ ಕೊರೊನಾ ಹಾವಳಿ ತಲೆ ಎತ್ತುವ ಮುನ್ಸೂಚನೆಗಳಿವೆ. ಬೆಂಗಳೂರಿನಲ್ಲಿ ಕೊರೊನಾ ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ. 

ರಾಜಧಾನಿಯಲ್ಲಿ ಬಿಎ.10, ಬಿಎ.2, 12 ಹೊಸ ವೈರಸ್‌ ಪತ್ತೆಯಾಗಿದೆ ಎಂದು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ.ಸಿ.ಎನ್‌. ಮಂಜುನಾಥ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬಿಎ.10, ಬಿಎ.2, 12 ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ. ಇನ್ನೀದು ದೆಹಲಿ, ಮುಂಬೈನಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಭಾರತದಲ್ಲಿ ಈಗಾಗಲೇ ಕೊರೊನಾ 4ನೇ ಅಲೆ ಆರಂಭವಾಗಿದೆ. ಇನ್ನು ಕರ್ನಾಟಕದಲ್ಲಿ 3-4 ವಾರಗಳಲ್ಲಿ 4ನೇ ಅಲೆ ಬರುವ ಸಾಧ್ಯತೆಯಿದೆ’ ಎಂದರು.

 ‘ಕೊರೊನಾ 4ನೇ ಅಲೆ 3ನೇ ಅಲೆಯ ಗುಣಲಕ್ಷಣಗಳನ್ನ ಹೊಂದಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇರುತ್ತದೆ. ರಾಜ್ಯದಲ್ಲಿ ಈಗಾಗಲೇ ಎಲ್ಲ ಚಟುವಟಿಕೆಗಳು ಆರಂಭವಾಗಿದೆ. ಇನ್ನೆರೆಡು ವಾರದಲ್ಲಿ ಕೊರೊನಾ ಕೇಸ್‌ ಸಂಖ್ಯೆಯೂ ಹೆಚ್ಚಾಗಲಿದೆ. ಶ್ವಾಸಕೋಶ, ಹೃದ್ರೋಗ, ಕ್ಯಾನ್ಸರ್‌ನಿಂದ ಬಳಲುವವರು ಹುಷಾರಾಗಿರಿ. ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಇನ್ನು ಜ್ವರ, ಕೆಮ್ಮು ಇದ್ದರೆ ಕಡ್ಡಾಯವಾಗಿ ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ. ಕೊರೊನಾ ಲಸಿಕೆ ಪಡೆದಿದ್ದೇವೆಂದು ನಿರ್ಲಕ್ಷ್ಯ ಮಾಡುವುದು ಬೇಡ’ ಎಂದರು.

ಇನ್ನು ‘ಆಸ್ಪತ್ರೆಗೆ ದಾಖಲಾಗುವವರಿಗೆ ಕೊವಿಡ್‌ ಟೆಸ್ಟ್‌ ಮಾಡಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್‌ ಟೆಸ್ಟಿಂಗ್‌ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ. ಇದರಿಂದ ರೂಪಾಂತರಿ ವೈರಸ್‌ ಹರಡುವುದನ್ನು ತಡೆಯಬಹುದು’ ಎಂದು ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು