9:24 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಬೆಂಗಳೂರಲ್ಲಿ BA.10, BA.2,12 ಕೊರೊನಾ ಹೊಸ ರೂಪಾಂತರಿ ವೈರಸ್‌ ಪತ್ತೆ; ಮತ್ತೆ ಮಾಸ್ಕ್ ಗೆ ಮೊರೆ

23/04/2022, 21:55

ಬೆಂಗಳೂರು(reporterkarnataka.com):

ರಾಜ್ಯದಲ್ಲಿ ಮತ್ತೆ ಕೊರೊನಾ ಹಾವಳಿ ತಲೆ ಎತ್ತುವ ಮುನ್ಸೂಚನೆಗಳಿವೆ. ಬೆಂಗಳೂರಿನಲ್ಲಿ ಕೊರೊನಾ ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ. 

ರಾಜಧಾನಿಯಲ್ಲಿ ಬಿಎ.10, ಬಿಎ.2, 12 ಹೊಸ ವೈರಸ್‌ ಪತ್ತೆಯಾಗಿದೆ ಎಂದು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ.ಸಿ.ಎನ್‌. ಮಂಜುನಾಥ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬಿಎ.10, ಬಿಎ.2, 12 ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ. ಇನ್ನೀದು ದೆಹಲಿ, ಮುಂಬೈನಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಭಾರತದಲ್ಲಿ ಈಗಾಗಲೇ ಕೊರೊನಾ 4ನೇ ಅಲೆ ಆರಂಭವಾಗಿದೆ. ಇನ್ನು ಕರ್ನಾಟಕದಲ್ಲಿ 3-4 ವಾರಗಳಲ್ಲಿ 4ನೇ ಅಲೆ ಬರುವ ಸಾಧ್ಯತೆಯಿದೆ’ ಎಂದರು.

 ‘ಕೊರೊನಾ 4ನೇ ಅಲೆ 3ನೇ ಅಲೆಯ ಗುಣಲಕ್ಷಣಗಳನ್ನ ಹೊಂದಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇರುತ್ತದೆ. ರಾಜ್ಯದಲ್ಲಿ ಈಗಾಗಲೇ ಎಲ್ಲ ಚಟುವಟಿಕೆಗಳು ಆರಂಭವಾಗಿದೆ. ಇನ್ನೆರೆಡು ವಾರದಲ್ಲಿ ಕೊರೊನಾ ಕೇಸ್‌ ಸಂಖ್ಯೆಯೂ ಹೆಚ್ಚಾಗಲಿದೆ. ಶ್ವಾಸಕೋಶ, ಹೃದ್ರೋಗ, ಕ್ಯಾನ್ಸರ್‌ನಿಂದ ಬಳಲುವವರು ಹುಷಾರಾಗಿರಿ. ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಇನ್ನು ಜ್ವರ, ಕೆಮ್ಮು ಇದ್ದರೆ ಕಡ್ಡಾಯವಾಗಿ ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ. ಕೊರೊನಾ ಲಸಿಕೆ ಪಡೆದಿದ್ದೇವೆಂದು ನಿರ್ಲಕ್ಷ್ಯ ಮಾಡುವುದು ಬೇಡ’ ಎಂದರು.

ಇನ್ನು ‘ಆಸ್ಪತ್ರೆಗೆ ದಾಖಲಾಗುವವರಿಗೆ ಕೊವಿಡ್‌ ಟೆಸ್ಟ್‌ ಮಾಡಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್‌ ಟೆಸ್ಟಿಂಗ್‌ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ. ಇದರಿಂದ ರೂಪಾಂತರಿ ವೈರಸ್‌ ಹರಡುವುದನ್ನು ತಡೆಯಬಹುದು’ ಎಂದು ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು