5:48 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಅಥಣಿ: ಒಂದೇ ದಿನ ಅಂಚೆ ಕಚೇರಿ ಹಾಗೂ 6 ಮನೆಗಳಿಗೆ ಕನ್ನ; ಲಕ್ಷಾಂತರ ಮೌಲ್ಯದ ನಗ, ನಗದು ಕಳವು

25/04/2022, 09:14

ಬೆಳಗಾವಿ(reporterkarnataka.com):

ಅಥಣಿ ಖಿಳೆಗಾಂವ ಗ್ರಾಮದಲ್ಲಿ ಒಂದೇ ದಿನ 6 ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳ್ಳತನ ಮಾಡಿದ ಘಟನೆ ನಡೆದಿದೆ.

ಖಿಳೇಗಾಂವ ಗ್ರಾಮದಲ್ಲಿ ಒಂದೇ ದಿನ 6 ಮನೆಗಳ ಹಾಗೂ ಅಂಚೆ ಕಛೇರಿಯ ಬೀಗ ಮುರಿದು ಲಕ್ಷಾಂತರ ರೂ.ಗಳ ಚಿನ್ನಾಭರಣ, ಮೋಟಾರ್ ಬೈಕ್, ಆಡಿನ ಮರಿ, ಟಿವಿ ಮತ್ತು ನಗದು ಹಣ ದೋಚಿಕೊಂಡು ಹೋದ ಘಟನೆ ನಡೆದಿದೆ

ಖಿಳೇಗಾಂವ ಗ್ರಾಮದ ಸುಶೀಲಾಬಾಯಿ ಹೊನ್ನಾಗೋಳ ಮನೆಯಲ್ಲಿ 25 ಸಾವಿರ ನಗದು ಹಾಗೂ 1 ತೊಲೆ ಬಂಗಾರದ ಆಭರಣ, ಶೀತಲ್ ಸುರೇಶ ಚಂಡಿ ಮನೆಯಲ್ಲಿ 3 ತೊಲೆ ಬಂಗಾರ ಹಾಗೂ ಸ್ಮಾರ್ಟ ಟಿವಿಯನ್ನು ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಲ್ಲದೆ  ಸಾಗರ ಸದಾಶಿವ ದಿವಾನಗೋಳ ಮನೆಯ ಹೊರಗಿದ್ದ ಮೋಟಾರ್ ಬೈಕ್ ಹಾಗೂ ಒಂದು ಆಡಿನ ಮರಿಯನ್ನು ಹೊತ್ತುಕೊಂಡು ಹೋಗಿದ್ದಾರೆ. ಗ್ರಾಮದಲ್ಲಿರುವ ಅಪ್ಪಾಸಾಹೇಬ ಮಲ್ಲಾಸಾಹೇಬ ಬಸರಗಿ ಮನೆಯ ಬೀಗ ಮುರಿದು ಎಲ್ಲ ಕಡೆ ಹುಡುಕಿದ ಕಳ್ಳರು ಅಲ್ಲಿ ಎನೂ ಸಿಗದೇ ಇದ್ದಾಗ ಮನೆಯ ಇನ್ನೊಂದು ಭಾಗದಲ್ಲಿದ್ದ ಅಂಚೆ ಕಛೇರಿಯ ಬೀಗವನ್ನೂ ಕೂಡ ಮುರಿದು ದಾಖಲೆಗಳನ್ನು ತಡಕಾಡಿ ಏನೂ ಸಿಗದೇ ಅಲ್ಲಿಂದ ಕಾಲ್ಕಿತ್ತಿದ್ದಾರೆ. 

ಸುದ್ದಿ ತಿಳಿದ ತಕ್ಷಣ ಅಥಣಿ ಪೊಲೀಸ್ ಠಾಣೆಯ ಪಿಎಸ್‍ಐ ಕುಮಾರ ಹಾಡಕರ ಖಿಳೇಗಾಂವ ಗ್ರಾಮಕ್ಕೆ ಭೇಟಿ ನೀಡಿ ಕಳ್ಳತನವಾದ ಎಲ್ಲ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು ಮನೆಗೆ ಬೀಗ ಹಾಕಿ ಬೇರೆ ಊರಿಗೆ ಹೋಗುವ ಮುನ್ನ ಪಂಚಾಯತ ಸಿಬ್ಬಂದಿ ಮೂಲಕ ಗ್ರಾಮದ ಬೀಟ್ ಪೊಲೀಸ್ ರಿಗೆ ಮಾಹಿತಿ ನೀಡಿ ಅಥವಾ ಪಕ್ಕದ ಮನೆಯವರಿಗೆ ಮಾಹಿತಿ ನೀಡಿ ಹೋಗಿ ಜೊತೆಗೆ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದು ಹಣವನ್ನು ನಿಮಗೆ ವಿಶ್ವಾಸ ಎನಿಸಿದ ಸಂಬಂಧಿಕರ ಅಥವಾ ಹಿತೈಶಿಗಳ ಮನೆಯಲ್ಲಿಟ್ಟು ಹೋಗಿ ಎಂದು ಮನವಿ ಮಾಡಿದರು. 

ಖಿಳೇಗಾಂವ ಗ್ರಾಮ ಪಂಚಾಯತ ಅಧ್ಯಕ್ಷ ರವಿ ನಾಗಗೋಳ ಮಾತನಾಡಿ, ಕೆಲವೇ ದಿನಗಳಲ್ಲಿ ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುತ್ತೇವೆ ಅಲ್ಲದೆ ಗ್ರಾಮಸ್ಥರು ಕೂಡ ಮನೆಯಿಂದ ಹೊರ ಹೋಗುವಾಗ ಮನೆಯಲ್ಲಿ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ಇಡಬೇಡಿ ಹಾಗೇನಿದ್ದರೂ ಕೂಡ ಹಣ ಮತ್ತು ಚಿನ್ನಾಭರಣಗಳನ್ನು ಸಂಬಂಧಿಕರ ಮನೆಯಲ್ಲಿ ಇಟ್ಟು ಹೋಗಿ ಎಂದು ಮನವಿ ಮಾಡಿದರು.

ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ಇತ್ತೀಚಿನ ಸುದ್ದಿ

ಜಾಹೀರಾತು