12:47 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ; ಜೂನ್ ಕೊನೆ ವಾರದಲ್ಲಿ ಫಲಿತಾಂಶ ಪ್ರಕಟ

25/04/2022, 09:23

ಬೆಂಗಳೂರು(reporterkarnataka.com):

ದ್ವಿತೀಯ ಪಿಯುಸಿ ಫಲಿತಾಂಶ ಈ ಬಾರಿ ತಡವಾಗಲ್ಲ. ಜೂನ್ ಕೊನೆ ವಾರದಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಮಂಡಳಿ ನಿರ್ದೆಶಕ ಆರ್. ರಾಮಚಂದ್ರನ್ ಮಾಹಿತಿ ನೀಡಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶ ತಡವಾಗಲ್ಲ. ಈವರೆಗೆ ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಒಂದೊಂದು ಪರೀಕ್ಷೆ ಮುಗಿಯುತ್ತಿದ್ದಂತೆ ಮೌಲ್ಯಮಾಪನ ಮಾಡಲಾಗುತ್ತಿದೆ. ಈ ವರ್ಷ ಏಪ್ರಿಲ್. ಮೇ ತಿಂಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಫಲಿತಾಂಶ ಬೇಗ ನೀಡಲು ರಜಾ ದಿನಗಳಲ್ಲೂ ಮೌಲ್ಯಮಾಪನ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೇ 20 ರಿಂದ ಜೂನ್ 15 ರೊಳಗೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ. ಉನ್ನತ ಶಿಕ್ಷಣ ಹೋಗಲು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು