12:27 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರಕಾರಿ ನೌಕರಿ ಗಿಟ್ಟಿಸಿಕೊಂಡವರಿಗೆ ಕಾದಿದೆ ಗ್ರಹಚಾರ: ತನಿಖೆಗೆ ರಾಜ್ಯ ಸರಕಾರ ಆದೇಶ

25/04/2022, 15:30

ಬೆಂಗಳೂರು(reporterkarnataka.com): ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರಕಾರಿ ನೌಕರಿ ಗಿಟ್ಟಿಸಿಕೊಂಡವರಿಗೆ ಮುಂದೆ ಕಾದಿದೆ ಗ್ರಹಚಾರ. ಕೆಲಸ ವಜಾಗೊಳ್ಳುವುದಲ್ಲದೆ, ಜೈಲು ಶಿಕ್ಷೆಯೂ ಆಗಲಿದೆ.

ರಾಜ್ಯದಿಂದ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರೋ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ ಹೀಗೆ ಸುಳ್ಳು ಮಾಹಿತಿ ನೀಡಿ, ಜಾತಿ ಪ್ರಮಾಣಪತ್ರವನ್ನು ಪಡೆದಿರುವ ಕುರಿತಂತೆ ಮಾಹಿತಿ ಸಂಗ್ರಹಿಸಿ ನೀಡಲು ಆದೇಶಿಸಿದೆ.

ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಎಲ್ಲ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ರಾಜ್ಯದ ಹಲವಾರು ಕಡೆ ಅನರ್ಹರು ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ಪಡೆದಿರೋ ಬಗ್ಗೆ ದಿನಾಂಕ 20-04-2022ರಂದು ನಡೆದ ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಯಲ್ಲಿ ಚರ್ಚೆಯಾಗಿರುತ್ತದೆ.

ಅಲ್ಲದೇ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವವರ ಬಗ್ಗೆ ಕ್ರಮ ಕೈಗೊಳ್ಳುವಂತೆ ಹಾಗೂ ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರಗಳನ್ನು ನೀಡಿರುವ ಅಧಿಕಾರಿ, ನೌಕರರನ್ನು ಕೂಡಲೇ ಅಮಾನತುಗೊಳಿಸಲು, ವಾರ್ಷಿಕ ವೇತನ ಬಡ್ತಿಗಳನ್ನು ಕಡಿತಗೊಳಿಸಲು ಹಾಗೂ ಆಂತಹ ಅಧಿಕಾರಿಗಳ ಸೇವಾ ವಹಿಯಲ್ಲಿ ನಮೂದಿಸಲು ತಿಳಿಸಿರುತ್ತಾರೆ.

ಹೀಗಾಗಿ 2010ರಿಂದ ಇಲ್ಲಿಯವರೆಗೆ ಬೇಡ ಜಂಗಮ ಜಾತಿಯ ಎಷ್ಟು ಪ್ರಮಾಣ ಪತ್ರಗಳನ್ನು ವಿತರಿಸಲಾಗಿದೆ ಎಂಬ ಮಾಹಿತಿ ನೀಡುವುದು. ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲೂಕುಗಳಲ್ಲಿ ಬೇಡ ಜಂಗಮ ಪ್ರಮಾಣ ಪತ್ರಗಳನ್ನು ನೀಡಿದವರುಗಳ ಹಾಗೂ ಪಡೆದುಕೊಂಡಿರುವವರ ವಿವರಗಳನ್ನು ಮತ್ತು ಪ್ರಮಾಣ ಪತ್ರದ ನಕಲು ಪ್ರತಿಗಳನ್ನು ಕ್ರೂಡೀಕರಿಸಿ, ಮರು ಟಪಾಲಿನಲ್ಲಿ ಸರ್ಕಾರಕ್ಕೆ ಕಳುಹಿಸುವಂತೆ ನಿರ್ದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು