6:41 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮತ್ತೆ ಕೊರೊನಾ ಹೆಚ್ಚಳ: ಖ್ಯಾತ ಹೃದಯ ತಜ್ಞ  ಡಾ.ದೇವಿ ಶೆಟ್ಟಿ ವೈರಾಣು ಸೋಂಕಿನ ಬಗ್ಗೆ ಹೇಳಿದ್ದೇನು?

25/04/2022, 23:39

ಹೊಸದಿಲ್ಲಿ(reporterkarnataka.com):ಕೊರೊನಾ 4ನೇ ಅಲೆಯ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಭಯ ಬೇಡ ಎಚ್ಚರ ವಹಿಸಿ ಎಂದು ಖ್ಯಾತ ಹೃದಯ ತಜ್ಞ ಡಾ. ದೇವಿ ಶೆಟ್ಟಿ ಸಲಹೆ ನೀಡಿದ್ದಾರೆ.

ಕೋವಿಡ್-19 ನಾಲ್ಕನೇ ಅಲೆಯ ಕುರಿತು ಭಯ ಪಡುವ ಅಗತ್ಯವಿಲ್ಲ. ಕೊಂಚ ಎಚ್ಚರ ಮತ್ತು ಏಕಾಗ್ರತೆ ವಹಿಸಿದರೆ ಸಾಕು. ನಮ್ಮ ನಿಗಾ ಸೋಂಕಿಗೆ ತುತ್ತಾದವರ ಮೇಲಲ್ಲ. ಬದಲಿಗೆ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾದವರ ಮೇಲಿರಬೇಕು ಎಂದು ಹೇಳಿದ್ದಾರೆ.

ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಜನರು ಮಾಸ್ಕ್ ಧರಿಸುವುದನ್ನು ಮುಂದುವರಿಸಿ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು. ಮೂರನೇ ಅಲೆಯ ಅಷ್ಟು ಗಂಭೀರವಾಗಿರಲಿಲ್ಲ, ಆದ್ದರಿಂದ ಭಯ ಪಡುವ ಅಗತ್ಯವಿಲ್ಲ. ನಾವು ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಸಂಖ್ಯೆಯನ್ನು ಮಾತ್ರ ನೋಡಬೇಕು. ಒಂದು ಲಕ್ಷ ಜನರು ಅಥವಾ 50,000 ಜನರು ಸೋಂಕಿಗೆ ತುತ್ತಾಗುತ್ತಾರೆ ಎಂದರೆ ಏನೂ ಅರ್ಥವಲ್ಲ. ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸಿ ಎಂದು ದೇವಿ ಶೆಟ್ಟಿ ಹೇಳಿದರು.

ಇಡೀ ದೇಶವು ಸೋಂಕಿಗೆ ತುತ್ತಾಗಬಹುದು, ಆದರೆ ಆಸ್ಪತ್ರೆಯಲ್ಲಿ ಯಾವುದೇ ಕೋವಿಡ್ ರೋಗಿಗಳಿಲ್ಲದಿದ್ದರೆ, ಯಾವುದೇ ಆತಂಕವಿಲ್ಲ. ಆದ್ದರಿಂದ ಆಸ್ಪತ್ರೆಯಲ್ಲಿನ ರೋಗಿಗಳ ಸಂಖ್ಯೆಯ ಮೇಲೆ ನಿಗಾ ವಹಿಸಬೇಕು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು