10:04 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮತ್ತೆ ಕೊರೊನಾ ಹೆಚ್ಚಳ: ಖ್ಯಾತ ಹೃದಯ ತಜ್ಞ  ಡಾ.ದೇವಿ ಶೆಟ್ಟಿ ವೈರಾಣು ಸೋಂಕಿನ ಬಗ್ಗೆ ಹೇಳಿದ್ದೇನು?

25/04/2022, 23:39

ಹೊಸದಿಲ್ಲಿ(reporterkarnataka.com):ಕೊರೊನಾ 4ನೇ ಅಲೆಯ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಭಯ ಬೇಡ ಎಚ್ಚರ ವಹಿಸಿ ಎಂದು ಖ್ಯಾತ ಹೃದಯ ತಜ್ಞ ಡಾ. ದೇವಿ ಶೆಟ್ಟಿ ಸಲಹೆ ನೀಡಿದ್ದಾರೆ.

ಕೋವಿಡ್-19 ನಾಲ್ಕನೇ ಅಲೆಯ ಕುರಿತು ಭಯ ಪಡುವ ಅಗತ್ಯವಿಲ್ಲ. ಕೊಂಚ ಎಚ್ಚರ ಮತ್ತು ಏಕಾಗ್ರತೆ ವಹಿಸಿದರೆ ಸಾಕು. ನಮ್ಮ ನಿಗಾ ಸೋಂಕಿಗೆ ತುತ್ತಾದವರ ಮೇಲಲ್ಲ. ಬದಲಿಗೆ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾದವರ ಮೇಲಿರಬೇಕು ಎಂದು ಹೇಳಿದ್ದಾರೆ.

ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಜನರು ಮಾಸ್ಕ್ ಧರಿಸುವುದನ್ನು ಮುಂದುವರಿಸಿ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು. ಮೂರನೇ ಅಲೆಯ ಅಷ್ಟು ಗಂಭೀರವಾಗಿರಲಿಲ್ಲ, ಆದ್ದರಿಂದ ಭಯ ಪಡುವ ಅಗತ್ಯವಿಲ್ಲ. ನಾವು ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಸಂಖ್ಯೆಯನ್ನು ಮಾತ್ರ ನೋಡಬೇಕು. ಒಂದು ಲಕ್ಷ ಜನರು ಅಥವಾ 50,000 ಜನರು ಸೋಂಕಿಗೆ ತುತ್ತಾಗುತ್ತಾರೆ ಎಂದರೆ ಏನೂ ಅರ್ಥವಲ್ಲ. ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸಿ ಎಂದು ದೇವಿ ಶೆಟ್ಟಿ ಹೇಳಿದರು.

ಇಡೀ ದೇಶವು ಸೋಂಕಿಗೆ ತುತ್ತಾಗಬಹುದು, ಆದರೆ ಆಸ್ಪತ್ರೆಯಲ್ಲಿ ಯಾವುದೇ ಕೋವಿಡ್ ರೋಗಿಗಳಿಲ್ಲದಿದ್ದರೆ, ಯಾವುದೇ ಆತಂಕವಿಲ್ಲ. ಆದ್ದರಿಂದ ಆಸ್ಪತ್ರೆಯಲ್ಲಿನ ರೋಗಿಗಳ ಸಂಖ್ಯೆಯ ಮೇಲೆ ನಿಗಾ ವಹಿಸಬೇಕು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು