1:34 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ  ಈಚನಾಳ ಗ್ರಾಮ ಪಂಚಾಯತ್ ಮುಂದೆ ಕಾಂಗ್ರೆಸ್ ಪ್ರತಿಭಟನೆ 

14/06/2021, 14:46

ಅಮರೇಶ್  ಲಿಂಗಸುಗೂರು ರಾಯಚೂರು

info.reporterkarnataka@gmail.com

ಕೇಂದ್ರ ಸರಕಾರದ ತೈಲ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ವತಿಯಿಂದ ಈಚನಾಳ ಗ್ರಾಮದ ಗ್ರಾಮ ಪಂಚಾಯತ್ ಮುಂದೆ ‘100 ನಾಟೌಟ್’ ಪ್ರತಿಭಟನೆ ಹಿರಿಯ ಕಾಂಗ್ರೆಸ್ ಮುಖಂಡ ಬಸನಗೌಡ ಮೇಟಿ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಆನಂದ ಕುಂಬಾರ ಮಾತನಾಡಿ,  ಕೊವಿಡ್-19 ಮಹಾಮಾರಿಯ ಹಿಡಿತಕ್ಕೆ ಸಿಕ್ಕಿ ಹೈರಾಣವಾಗಿರುವ ಜನಸಾಮಾನ್ಯರ ದುಸ್ಥಿತಿಯ ನಡುವೆಯೇ ಸಂವೇದನಾರಹಿತ ಕೇಂದ್ರ ಸರಕಾರದ ನೀತಿಗಳಿಂದ ಪೆಟ್ರೋಲ್ ಮತ್ತು ಡೀಸಿಲ್ ಬೆಲೆಗಳು ದಿನೇ ದಿನೇ ಏರುತ್ತಿದೆ. ಬಹಳ ಕಡೆ ಲೀಟರ್ ಒಂದರ ಬೆಲೆ ನೂರರ ಗಡಿ ದಾಟಿದೆ. ಇನ್ನುಳಿದ ಕಡೆ ನೂರರ ಹೊಸ್ತಿಲಲ್ಲಿದೆ. ಈ ಬೆಲೆ ಏರಿಕೆಯಿಂದಾಗಿ ಮನೆಬಳಕೆ ಹಾಗೂ ದೈನಂದಿನ ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಕಳೆದ 13 ತಿಂಗಳುಗಳಲ್ಲಿ ಪೆಟ್ರೋಕ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ ತಲಾ ರೂಪಾಯಿ 25.72 ಮತ್ತು ರೂಪಾಯಿ 23.93 ರಷ್ಟು ಏರಿಕೆಯಾಗಿವೆ. ಕಳೆದ 5 ತಿಂಗಳುಗಳಲ್ಲಿ 43 ಬಾರಿ ದರಗಳನ್ನು ಏರಿಕೆಯಾಗಿದೆ ಎಂದು ಕಿಡಿ ಕಾರಿದರು.

ಕಾಂಗ್ರೆಸ್ ಮುಖಂಡರು ಪಿರಸಾಬ ಪಂಚಮ್, ಆದಪ್ಪ ಮೇಟಿ, ದೊಡ್ಡಪ್ಪ ಚಿಗರಿ, ಯಮನಪ್ಪ ಕಟ್ಟೀಮನಿ,  ಸಣ್ಣಗದ್ದೆಪ್ಪ ಚಿಗರಿ,ಮಲ್ಲರಡ್ಡೆಪ್ಪ ದೊಡ್ಡಮನಿ, ಮರಿಯಪ್ಪ ಕಟ್ಟಿಮನಿ, ಹನುಮಂತ ಕುರಿ, ಉಮೇಶ ಚವ್ಹಾಣ, ಖೇಮಣ್ಣ ರಾಠೋಡ, ಗೋವಿಂದ ಪವಾರ್, ಅಮರೇಶ ಮೇಟಿ, ದೇವರೇಡ್ಡಿ ಮೇಟಿ, ಗದ್ದೆಪ್ಪ ಕಟ್ಟಿಮನಿ, ಗದ್ದೆಪ್ಪ ಗೌಂಡಿ, ಶ್ರವಣಕುಮಾರ ದಾಸರ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು